ಅಂತರಾಜ್ಯ ಬಸ್ ಸಂಚಾರ ಆರಂಭ

Date:

ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಳ್ಳಾರಿಯಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಬಸ್ಸುಗಳ ಸಂಚಾರವನ್ನು ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಳ್ಳಾರಿ-ಚೆನ್ನೈ, ಬಳ್ಳಾರಿ-ಹೈದರಾಬಾದ್ ನಡುವೆ ಐಷಾರಾಮಿ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿದೆ. ಬಳ್ಳಾರಿ-ಬೆಂಗಳೂರು ಮತ್ತು ಹರಪನಹಳ್ಳಿಯಿಂದ ಕೊಟ್ಟೂರು, ಕೂಡ್ಲಿಗಿ ಮತ್ತು ಹೊಸಪೇಟೆ ಮಾರ್ಗವಾಗಿ ಕಲಬುರಗಿಗೆ ಬಸ್ ಸಂಚಾರವನ್ನು ಪ್ರಾರಂಭಿಸಲಾಗಿದೆ.

ಬಳ್ಳಾರಿ ವಿಭಾಗ ಬಳ್ಳಾರಿ-ಚೆನ್ನೈ ಮಾರ್ಗದಲ್ಲಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆಗಸ್ಟ್ 27ರಿಂದ ಪುನಃ ಪ್ರಾರಂಭಿಸುತ್ತಿದೆ. ಈ ಕುರಿತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಮಾಹಿತಿ ನೀಡಿದ್ದಾರೆ. ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಬಳ್ಳಾರಿ-ಚೆನ್ನೈ ವಯಾ ಅನಂತಪುರ ಮಾರ್ಗದಲ್ಲಿ ನಾನ್‍ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭವಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...