ಅಂತರಾಜ್ಯ ಬಸ್ ಸಂಚಾರ ಆರಂಭ

Date:

ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಳ್ಳಾರಿಯಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಬಸ್ಸುಗಳ ಸಂಚಾರವನ್ನು ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಳ್ಳಾರಿ-ಚೆನ್ನೈ, ಬಳ್ಳಾರಿ-ಹೈದರಾಬಾದ್ ನಡುವೆ ಐಷಾರಾಮಿ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿದೆ. ಬಳ್ಳಾರಿ-ಬೆಂಗಳೂರು ಮತ್ತು ಹರಪನಹಳ್ಳಿಯಿಂದ ಕೊಟ್ಟೂರು, ಕೂಡ್ಲಿಗಿ ಮತ್ತು ಹೊಸಪೇಟೆ ಮಾರ್ಗವಾಗಿ ಕಲಬುರಗಿಗೆ ಬಸ್ ಸಂಚಾರವನ್ನು ಪ್ರಾರಂಭಿಸಲಾಗಿದೆ.

ಬಳ್ಳಾರಿ ವಿಭಾಗ ಬಳ್ಳಾರಿ-ಚೆನ್ನೈ ಮಾರ್ಗದಲ್ಲಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆಗಸ್ಟ್ 27ರಿಂದ ಪುನಃ ಪ್ರಾರಂಭಿಸುತ್ತಿದೆ. ಈ ಕುರಿತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಮಾಹಿತಿ ನೀಡಿದ್ದಾರೆ. ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಬಳ್ಳಾರಿ-ಚೆನ್ನೈ ವಯಾ ಅನಂತಪುರ ಮಾರ್ಗದಲ್ಲಿ ನಾನ್‍ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭವಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...