ಅಂತರಾಜ್ಯ ಬಸ್ ಸಂಚಾರ ಆರಂಭ

Date:

ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಳ್ಳಾರಿಯಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಬಸ್ಸುಗಳ ಸಂಚಾರವನ್ನು ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಳ್ಳಾರಿ-ಚೆನ್ನೈ, ಬಳ್ಳಾರಿ-ಹೈದರಾಬಾದ್ ನಡುವೆ ಐಷಾರಾಮಿ ಬಸ್‌ಗಳ ಸಂಚಾರವನ್ನು ಆರಂಭಿಸಲಾಗಿದೆ. ಬಳ್ಳಾರಿ-ಬೆಂಗಳೂರು ಮತ್ತು ಹರಪನಹಳ್ಳಿಯಿಂದ ಕೊಟ್ಟೂರು, ಕೂಡ್ಲಿಗಿ ಮತ್ತು ಹೊಸಪೇಟೆ ಮಾರ್ಗವಾಗಿ ಕಲಬುರಗಿಗೆ ಬಸ್ ಸಂಚಾರವನ್ನು ಪ್ರಾರಂಭಿಸಲಾಗಿದೆ.

ಬಳ್ಳಾರಿ ವಿಭಾಗ ಬಳ್ಳಾರಿ-ಚೆನ್ನೈ ಮಾರ್ಗದಲ್ಲಿ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಆಗಸ್ಟ್ 27ರಿಂದ ಪುನಃ ಪ್ರಾರಂಭಿಸುತ್ತಿದೆ. ಈ ಕುರಿತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಮಾಹಿತಿ ನೀಡಿದ್ದಾರೆ. ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಸ್ಸುಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಬಳ್ಳಾರಿ-ಚೆನ್ನೈ ವಯಾ ಅನಂತಪುರ ಮಾರ್ಗದಲ್ಲಿ ನಾನ್‍ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭವಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...