ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಮ್ಯಾರಥಾನ್ ಓಟದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಬ್ಬರು ಯವಕರು ಬಂಗಾರ, ಬೆಳ್ಳಿ ಪದಕ ಪಡೆಯುವುದರ ಮೂಲಕ ಕರ್ನಾಟಕ ಕೀರ್ತಿಯನ್ನು ಮತಷ್ಟು ಹೆಚ್ಚಿಸಿದ್ದಾರೆ.
ಗೋವಾದಲ್ಲಿ ಯುವ ಕ್ರೀಡಾ ಅಭಿವೃದ್ಧಿ ಅಸೋಶಿಯೇಶನ್ ಇಂಡಿಯಾ ಮತ್ತು ಗೋವಾ ಅಸೋಶಿಯೇಶನ್ ವತಿಯಿಂದ ಏರ್ಪಡಿಸಿದ್ದ ಮ್ಯಾರಥಾನ್ನಲ್ಲಿ ಮಲಿಕವಾಡದ ಮಹೇಶ ತೊಂಬರೆ ಹಾಗೂ ಯಕ್ಸಂಬಾ ಪಟ್ಟಣದ ರಾಮು ಮಾಳಿ ಇಬ್ಬರು ಚಿನ್ನದ ಪದಕ ಪಡೆದಿದ್ದರು. ಈ ಮೂಲಕ ನೇಪಾಳದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚಾಂಪಿಯನ್ಶಿಪ್ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿಕೊಂಡಿದ್ದರು.
ನೇಪಾಳದಲ್ಲಿ ನಡೆದ ಮ್ಯಾರಥಾನ್ನಲ್ಲಿ ರಾಮು ಚಿನ್ನದ ಪದಕೆ ಪಡೆದರೆ, ಮಹೇಶ್ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ರಾಮು ಹಾಗೂ ಮಹೇಶ್ ಇಬ್ಬರು ಮಂಗಳವಾರ ರಾತ್ರಿ ಮಲಿಕವಾಡಕ್ಕೆ ಆಗಮಿಸಿದ್ದು, ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದ್ದಾರೆ.