No menu items!
23.4 C
Munich
Saturday, May 2, 2026

ಅಗ್ನಿ ಅವಘಡ: ವಿಜಯೋತ್ಸವ ವೇಳೆ ನೂತನ ಶಾಸಕನಿಗೆ ಗಾಯ!

Must read

ಅಗ್ನಿ ಅವಘಡ: ವಿಜಯೋತ್ಸವ ವೇಳೆ ನೂತನ ಶಾಸಕನಿಗೆ ಗಾಯ!

ಮುಂಬೈ:- ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಮಹಗಾಂವ್ ಪಟ್ಟಣದಲ್ಲಿ ನೂತನ ಶಾಸಕನ ವಿಜಯೋತ್ಸವ ಸಂದರ್ಭದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಜರುಗಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಾಜಿ ಪಾಟೀಲ್‌ ಅವರಿಗೆ ಅಭಿಮಾನಿಗಳು ಆರತಿ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲವನ್ನು ಆರತಿ ಮೇಲೆ ಸುರಿಯಲಾಗಿದೆ. ಈ ವೇಳೆ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಹೊತ್ತಿದೆ. ಅವಘಡದಲ್ಲಿ ನೂತನ ಶಾಸಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬೆಂಕಿ ಹೊತ್ತಿಕೊಳ್ಳುತ್ತಲೇ ಜನ ಅಲ್ಲಿಂದ ಓಡಿದ್ದಾರೆ. ಅಲ್ಲದೇ ಬೆಂಕಿ ಸಹ ಕೂಡಲೇ ನಿಯಂತ್ರಣಕ್ಕೆ ಬಂದಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -spot_img

More articles

- Advertisement -spot_img

Latest article