ಅಣ್ತಮ್ಮನಾ’ದ ಅಚ್ಯುತ್ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ…ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನಿಮಾ ಇದು

Date:

*’ಅಣ್ತಮ್ಮನಾ’ದ ಅಚ್ಯುತ್ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ…ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನಿಮಾ ಇದು*

ಪೇಟಾ’ಸ್ ಸಿನಿ ಕೆಫೆ ಮತ್ತು ಫಿಲ್ಮಿ ಮಾಂಕ್ ಸಹಯೋಗದೊಂದಿಗೆ ಕಿರಾತಕ ಪ್ರದೀಪ್ ರಾಜ್, ಪಿ ಸಿ ಶೇಖರ್, ಪ್ರಶಾಂತ್ ರಾಜಪ್ಪ ನಿರ್ದೇಶನ ತಂಡದಲ್ಲಿ ಕೆಲಸ ಮಾಡಿದ ಅನುಭವ ಇರುವ ವಿಶ್ವ ನಿರ್ದೇಶನದ ಚೊಚ್ಚಲ ಚಿತ್ರ ‘ಅಣ್ತಮ್ತನ’ ಘೋಷಣೆ ಆಗಿದೆ.

ಈ ಚಿತ್ರದಲ್ಲಿ ಬಹುಭಾಷಾ ನಟ ಅಚ್ಯುತ್ ಕುಮಾರ್ ಮತ್ತು ಬಹುಬೇಡಿಕೆಯ ನಟ ಗೋಪಾಲಕೃಷ್ಣ ದೇಶಪಾಂಡೆ ಅಣ್ಣ ತಮ್ಮಂದಿರಾಗಿ ಮುಖ್ಯಭೂಮಿಕೆಯಲ್ಲಿ ಮತ್ತು ಒಂದ್ ಕಥೆ ಹೇಳ್ಲಾ ಹಾಗೂ ಶಾಲಿವಾಹನ ಶಕೆ ಖ್ಯಾತಿಯ ಗಿರೀಶ್ ಜಿ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ವಿಶ್ವಜಿತ್ ರಾವ್ ಛಾಯಾಗ್ರಹಣ ಪೂರ್ಣಚಂದ್ರ ತೇಜಸ್ವಿ ಎಸ್ ವಿ ಅವರ ಸಂಗೀತ, ಶೈಲೇಶ್ ಕುಮಾರ್ ಸಂಭಾಷಣೆ, ಹರಿ ಪರಾಕ್ ಸಾಹಿತ್ಯ ಇರುವ ಚಿತ್ರ ಅಣ್ತಮ್ತನ.

ಈ ಚಿತ್ರ ಅಣ್ಣ ತಮ್ಮ ಸಂಬಂಧ, ನಮ್ಮ ಮಣ್ಣಿನ ಆಚರಣೆ, ಹಳೆ ಮೈಸೂರು ಸಂಸ್ಕೃತಿ, ನಂಬಿಕೆ ಮೂಢನಂಬಿಕೆಗಳ ಸುತ್ತ ಹೆಣೆದಿರುವ ಕಥೆ ಹೊಂದಿದೆ.

ಆದಿಚುಂಚನಗಿರಿ, ನಾಗಮಂಗಲ, ಮದ್ದೂರು, ಮಂಡ್ಯ ಸುತ್ತ-ಮುತ್ತ ಚಿತ್ರೀಕರಣ ನಡೆಯಲಿದ್ದು, ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...