ಅತ್ಯಾಚಾರ ಆರೋಪಿ ರಾಜ್ಯದ ಭವಿಷ್ಯ ಆಸ್ತಿ ಎಂದು ತೀರ್ಪು ಕೊಟ್ಟ ಕೋರ್ಟ್

Date:

ದೂರು ನೀಡಿದ ವ್ಯಕ್ತಿ ಹಾಗೂ ಆರೋಪಿತ ವ್ಯಕ್ತಿ ಇಬ್ಬರು ರಾಜ್ಯದ ಮುಂದಿನ ಭವಿಷ್ಯ ಎಂದು ಹೇಳಿ ಗುವಾಹಟಿ ಹೈಕೋರ್ಟ್ ಗುವಾಹಟಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಅತ್ಯಾಚಾರ ಆರೋಪಿತ ವಿದ್ಯಾರ್ಥಿಗೆ ಜಾಮೀನು ಮಂಜೂರು ಮಾಡಿದೆ. ಆಗಸ್ಟ್‌ 13 ರಂದು ಗುವಾಹಟಿ ಹೈಕೋರ್ಟ್ ಮಾರ್ಚ್‌ನಲ್ಲಿ ಅತ್ಯಾಚಾರ ಆರೋಪಕ್ಕೆ ಒಳಗಾದ ಐಐಟಿ ವಿದ್ಯಾರ್ಥಿ ಉತ್ಸವ್‌ ಕದಮ್‌ಗೆ ಜಾಮೀನು ನೀಡಿದೆ. ಈ ಜಾಮೀನು ನೀಡುವ ಸಂದರ್ಭದಲ್ಲಿ, ನ್ಯಾಯಮೂರ್ತಿ ಅಜಿತ್‌ ಬೂರ್ತಾಕುರ್‌, “ಸಂತ್ರಸ್ತೆ ಹಾಗೂ ಅತ್ಯಾಚಾರಿ ಆರೋಪಿಯು ಇಬ್ಬರೂ ಐಐಟಿ ವಿದ್ಯಾರ್ಥಿಗಳು ಆಗಿರುವ ಕಾರಣ ಇಬ್ಬರೂ ರಾಜ್ಯಗಳ ಮುಂದಿನ ಭವಿಷ್ಯ,” ಎಂದು ಹೇಳಿದ್ದಾರೆ.

“ಗುವಾಹಟಿಯ ಐಐಟಿಯಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ಇಬ್ಬರೂ ವಿದ್ಯಾರ್ಥಿಗಳು ಕೂಡಾ ಪ್ರತಿಭಾವಂತರು. ಹಾಗೆಯೇ 19 ರಿಂದ 21 ವಯಸ್ಸಿನೊಳಗಿನವರು. ಇನ್ನು ಈ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಕ್ಕೆ ಸೇರಿದವರು. ರಾಜ್ಯದ ಭವಿಷ್ಯದ ಆಸ್ತಿ,” ಎಂದು ನ್ಯಾಯಮೂರ್ತಿ ಅಜಿತ್‌ ಬೂರ್ತಾಕುರ್‌ ಆರೋಪಿಗೆ ಜಾಮೀನು ನೀಡುವ ಸಂದರ್ಭ ತಿಳಿಸಿದ್ದಾರೆ.

ಇನ್ನು ನ್ಯಾಯಾಲಯಕ್ಕೆ ಎಫ್‌ಐಆರ್‌, ವೈದ್ಯಕೀಯ ವರದಿ ಮತ್ತು ಸಾಕ್ಷ್ಯಗಳ ಹೇಳಿಕೆಗಳಿಂದ ಆರೋಪಿತ ವಿದ್ಯಾರ್ಥಿ ತಪ್ಪಿತಸ್ಥ ಎಂದು ತಿಳಿದು ಬಂದಿದೆ. ಆದರೂ ಯುವಕ, ಯುವತಿ ಇಬ್ಬರೂ ರಾಜ್ಯದ ಭವಿಷ್ಯದ ಆಸ್ತಿ ಎಂದು ಜಾಮೀನು ನೀಡಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

 

 

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...