ಅಪ್ಪುಗೆ ದೊಡ್ಡ ಗೌರವದ ಪ್ರಶಸ್ತಿ ನೀಡಿದ ರಾಜ್ಯ ಸರ್ಕಾರ

Date:

ಪುನೀತ್ ರಾಜ್ ಕುಮಾರ್ ( Puneet Rajkumar ) ನಿಧನರಾದ ದಿನದಂದು ಆ ಸುದ್ದಿ ಕೇಳಿ ನಾನು ಶಾಕ್ ಆಗಿದ್ದೆ. ಅವರ ಸಾವು ಅಕಾಲಿಕವಾಗಿದೆ. ಮುತ್ತಾರಾಜನ ಮುತ್ತು ದೈಹಿಕವಾಗಿ ನಮ್ಮ ಜೊತೆಗೆ ಇಲ್ಲ. ಅವರ ಸಾಧನೆಯ ಮೂಲಕ ನಮ್ಮ ಜೊತೆಗೆ ಇದ್ದಾರೆ. 

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನಮ್ಮ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಘೋಷಣೆ ಮಾಡಿದರು. ಇಂದು ಅರಮನೆ ಮೈದಾನದಲ್ಲಿ ನಡೆಯುತ್ತಿರುವಂತ ಪುನೀತ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದಂತ ಅವರು, ಅಗಲಿದ ಅಪ್ಪುವಿನ ಪಾರ್ಥೀವ ಶರೀರದ ದರ್ಶನ ಸಂದರ್ಭದಲ್ಲಿ ನನ್ನ ಮುತ್ತು ಕೊಟ್ಟ ಬಗ್ಗೆ ಬೇರೆಯವರು ಬೇರೆ ಬೇರೆ ರೀತಿಯಲ್ಲಿ ಅಂದುಕೊಂಡಿದ್ದರು. ಆದ್ರೇ ಆ ಮುತ್ತನ್ನು ಕನ್ನಡಿಗರೆಲ್ಲರ ಪರವಾಗಿ ನೀಡಿದ್ದೇನೆ ಎಂಬುದಾಗಿ ತಿಳಿಸಿದರು. 

ನಟ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳ ಕಂಠೀರವ ಸ್ಟುಡೀಯೋದಲ್ಲಿನ ಪುತ್ಥಳಿ ಸೇರಿದಂತೆ ಅಲ್ಲಿನ ಸಮಾಧಿ ನಿರ್ಮಾಣ ಸೇರಿದಂತೆ ವಿವಿಧ ಕೆಲಸವನ್ನು ಸರ್ಕಾರವೇ ಮುಂದೆ ನಿಂತು ಮಾಡಲಿದೆ. ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ ಕಾರ್ಯಕ್ಕೆ ಎಲ್ಲಾ ಸಹಕಾರವನ್ನು ನೀಡಲಾಗುತ್ತದೆ ಎಂದರು.

ಪುನೀತ್ ರಾಜ್ ಕುಮಾರ್ ಅವರಿಗೆ ನಾಡಿನ ಜನರ ಅಭಿಲಾಷೆಯಂತೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ನಿರ್ಧರಿಸಲಾಗಿದೆ. ಇದಷ್ಟೇ ಅಲ್ಲದೇ ಕೇಂದ್ರ ಸರ್ಕಾರದಿಂದಲೂ ಪ್ರಶಸ್ತಿ ನೀಡೋದಕ್ಕೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಶಿಫಾರಸ್ಸು ಮಾಡಲಾಗುತ್ತದೆ ಎಂಬುದಾಗಿ ಹೇಳಿದರು.

 

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...