ಅಪ್ಪು ಸಾವಿನ ಸುದ್ದಿ ಕೇಳಿದ ಅಭಿಮಾನಿ ಹೃದಯಾಘಾತದಿಂದ ಸಾವು!

Date:

ಜಮೀನಿನಿಂದ ಹಿಂತಿರುಗಿ ಬಂದ ಅಪ್ಪು ಅಭಿಮಾನಿಯೋರ್ವ ಪುನೀತ್ ಸಾವಿನ ಸುದ್ದಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ನಡೆದಿದೆ.

 

ಮುನಿಯಪ್ಪ(28) ಮೃತ ಅಪ್ಪು ಅಭಿಮಾನಿ‌.‌ ಜಮೀನಿನಿಂದ ಊಟಕ್ಕೆ ಬಂದಿದ್ದ ಈತ ಟಿವಿ ಹಾಕಿದ ವೇಳೆ ಪುನೀತ್ ಸಾವಿನ ಸುದ್ದಿ ಪ್ರಸಾರವಾಗಿದೆ. ನೆಚ್ಚಿನ ನಟನ ಸಾವಿನ ಸುದ್ದಿ ನೋಡುತ್ತಿದ್ದಂಯೇ ಮುನಿಯಪ್ಪ ಕುಸಿದು ಬಿದ್ದು ಸ್ಥಳದಲ್ಲೇ ಅಸುನೀಗಿದ್ದಾನೆ. ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತಾದರೂ ಅದಾಗಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

 

ಈ ಸಂಬಂಧ ಸ್ಥಳೀಯ ಸಮಾಜಸೇವಕ ರಾಜು ಈಟಿವಿ ಭಾರತದೊಂದಿಗೆ ಮಾತನಾಡಿ, ಮೃತ ಮುನಿಯಪ್ಪ ಅಪ್ಪಟ ಪುನೀತ್ ರಾಜ್​ ಕುಮಾರ್​ ಅಭಿಮಾನಿಯಾಗಿದ್ದು, ಅವರ ಎಲ್ಲಾ ಚಿತ್ರವನ್ನು ಎರಡು-ಮೂರು ಬಾರಿ ನೋಡುತ್ತಿದ್ದನು.

ಇಲ್ಲಿನ ಚಿತ್ರಮಂದಿರಗಳ ಚೆನ್ನಾಗಿರುವುದಿಲ್ಲವೆಂದು ಬೆಂಗಳೂರಿಗೆ ತೆರಳಿ ಅಲ್ಲೇ ಅಪ್ಪು ಚಿತ್ರಗಳನ್ನ ಎರಡು ಮೂರು ಶೋಗಳನ್ನು ನೋಡಿ ಬರುತ್ತಿದ್ದರು. ದಿಢೀರನೇ ಮೃತಪಟ್ಟ ವಿಚಾರ ತಿಳಿದು ಈ ಅವಘಡ ಸಂಭವಿಸಿದೆ ಎಂದು ತಿಳಿಸಿದರು.

 

ಇನ್ನು, ಅಪ್ಪು ಅಭಿಮಾನಿ ಮುನಿಯಪ್ಪಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳು, ಓರ್ವ ತಂಗಿಯೂ ಇದ್ದಾಳೆ.

Share post:

Subscribe

spot_imgspot_img

Popular

More like this
Related

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಹಾಡಹಗಲೇ ಕೋಟಿ ಕೋಟಿ ದರೋಡೆ! ಬೆಂಗಳೂರು:  ಸಿಲಿಕಾನ್ ಸಿಟಿ...

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ!

Mantri Mall: ಮತ್ತೆ ಮಲ್ಲೇಶ್ವರಂ ಮಂತ್ರಿ ಮಾಲ್ʼ​ಗೆ ಬಿತ್ತು ಬೀಗ! ಬೆಂಗಳೂರು: ಕೋಟಿ...

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ

ಭ್ರಷ್ಟ-ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ: ವಿಜಯೇಂದ್ರ ದಕ್ಷಿಣ ಕನ್ನಡ:...

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ

ಮಧುಮೇಹದ ಮುನ್ನ ಬರುವ ಲಕ್ಷಣಗಳು: ನಿರ್ಲಕ್ಷ್ಯ ಮಾಡಿದರೆ ಅಪಾಯ ಗಂಭೀರ ಇತ್ತೀಚಿನ ದಿನಗಳಲ್ಲಿ...