ಅಫ್ಘಾನಿಸ್ತಾನದಲ್ಲಿ ಸಿಲುಕಿದ ತೀರ್ಥಹಳ್ಳಿಯ ವ್ಯಕ್ತಿ

Date:

ಶಿವಮೊಗ್ಗ ಮೂಲದ ಪಾದ್ರಿಯೊಬ್ಬರು ತಾಲಿಬಾನ್ ಉಗ್ರ ಸಂಘಟನೆ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ. ರಕ್ಷಣೆಯ ನಿರೀಕ್ಷೆಯಲ್ಲಿಯಲ್ಲಿ ಅವರು ಇದ್ದು, ಕುಟುಂಬದವರು, ಕ್ರೈಸ್ತ ಸಮುದಾಯ ಈಗ ಆತಂಕದಲ್ಲಿದೆ.

ಅಫ್ಘಾನಿಸ್ತಾನದ ತಾಲಿಬಾನ್ ಫೋಟೋ
ತೀರ್ಥಹಳ್ಳಿ ತಾಲೂಕಿನ ದೊಡ್ಡಮನೆ ಕೇರಿ ವಾಸಿಯಾಗಿರುವ ಫಾದರ್ ರಾಬರ್ಟ್ ಅಫ್ಘಾನಿಸ್ಥಾನದಲ್ಲಿದ್ದಾರೆ. ಧರ್ಮ ಪ್ರಚಾರದ ಉದ್ದೇಶದಿಂದ ಅವರು ಅಫ್ಘಾನಿಸ್ಥಾನದ ಬಾಮಿಯಾನ್ ಎಂಬಲ್ಲಿ ಚರ್ಚ್‌ನಲ್ಲಿದ್ದು, ಸೇವೆ ಸಲ್ಲಿಸುತ್ತಿದ್ದರು. ಈಗ ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶದಲ್ಲಿದೆ. ಕರ್ನಾಟಕದ ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರದ ಫಾದರ್ ರಾಬರ್ಟ್ ಬಾಮಿಯಾನ್ ಪ್ರಾಂತ್ಯದಲ್ಲೇ ಸಿಕ್ಕಿಬಿದ್ದಿದ್ದಾರೆ. ವಿಶ್ವಸಂಸ್ಥೆಯ ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ.
ಫಾದರ್ ರಾಬರ್ಟ್ ಸುರಕ್ಷತೆ ಕುರಿತು ಮಂಗಳೂರು ಮೂಲದ ಫಾದರ್ ಜೆರೋಮ್ ಸಿಕ್ವೇರಾ ಭಾರತದಲ್ಲಿರುವ ತಮ್ಮ ಸಹವರ್ತಿಗಳಿಗೆ ಈ-ಮೇಲ್ ಮಾಡಿದ್ದಾರೆ. ಫಾದರ್ ಜೆರೋಮ್ ಸಿಕ್ವೇರಾ ಅಫ್ಘಾನಿಸ್ಥಾನದ ಕಾಬುಲ್‌ನಲ್ಲಿ ಧರ್ಮ ಸೇವೆಯಲ್ಲಿದ್ದಾರೆ. ತಮ್ಮ ಈ ಮೇಲ್‌ನಲ್ಲಿ ತೀರ್ಥಹಳ್ಳಿ ಮೂಲದ ಫಾದರ್ ರಾಬರ್ಟ್ ಕುರಿತು ಪ್ರಸ್ತಾಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...