ಅಬ್ಬಾ ತಂದೆಯ ರುಂಡ ಚೆಂಡಾಡಿ ಮಾನಸಿಕ ಅಸ್ವಸ್ಥನಂತೆ ನಟಿಸಿದ!

Date:

ಕ್ಲುಲ್ಲಕ ಕಾರಣಕ್ಕೆ ತಂದೆ – ಮಗನ ನಡುವೆ ನಡೆದ ಜಗಳ ತಂದೆಯ ಬರ್ಬರ ಹತ್ಯೆಯಲ್ಲಿ ಕೊನೆಗೊಂಡಿರುವ ಘಟನೆ ಪಾಣಾಜೆ ಗ್ರಾಮದ ಕಲ್ಲಪದವು ಕಂಚಿಲ್ಕುಂಜದಲ್ಲಿ ಬುಧವಾರ ನಡೆದಿದೆ. ತಂದೆಯ ರುಂಡ ಚೆಂಡಾಡಿದ ಮಗನೆಂಬ ಕ್ರೂರಿ ಬಳಿಕ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದಾನೆ.

ಕ್ರಷ್ಣ ನಾಯ್ಕ (65) ಕೊಲೆಯಾದವರು. ಪುತ್ರ ಉದಯನಾಯ್ಕ ಆರೋಪಿ. ತಂದೆ – ಮಗನ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಬುಧವಾರ ಕೂಲಿ ಕೆಲಸ ಮುಗಿಸಿ ಕೃಷ್ಣ ನಾಯ್ಕ ಮನೆಗೆ ಬಂದಾಗ, ಉದಯನಾಯ್ಕ್ ಜಗಳ ಶುರುಮಾಡಿದ್ದಾನೆ. ಆ ಜಗಳ ತಾರಕಕ್ಕೇರಿದ್ದು, ಉದಯ್ ಕೃಷ್ಣ ಅವರ ಕುತ್ತಿಗೆಯನ್ನು ಮಚ್ಚಿನಿಂದ ಕಡಿದಿದ್ದಾನೆ. ರುಂಡ – ಮುಂಡ ಬೇರ್ಪಟ್ಟಿದ್ದು, ಮನೆಯಲ್ಲಿದ್ದ ತಾಯಿ ಬೊಬ್ಬೆ ಹಾಕಿದಾಗ ಸ್ಥಳೀಯರು ಬಂದಿದ್ದಾರೆ. ಈ ವೇಳೆ ಕೃಷ್ಣ ನಾಯ್ಕ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.

ನನ್ನನ್ನು ಪೊಲೀಸರು ಏನೂ ಮಾಡುವಂತಿಲ್ಲ! : ಕೊಲೆ ಮಾಡಿದ ಬಳಿಕ ಮನೆಯ ಅಂಗಳದಲ್ಲಿದ್ದ ಆರೋಪಿ ಉದಯ ಒಂದಷ್ಟು ಮದ್ಯದ ಬಾಟಲಿಯನ್ನು ರಾಶಿ ಹಾಕಿ ನನ್ನದೇನು ತಪ್ಪಿಲ್ಲ. ತಂದೆಯೇ ಕುಡಿದು ಬಂದು ಹೀಗೆ ಮಾಡಿದ್ದಾರೆ. ನಾನು ಮಾನಸಿಕ ಅಸ್ವಸ್ಥ ನನ್ನನ್ನು ಪೊಲೀಸರು ಏನೂ ಮಾಡುವಂತಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ಎರಡು ಬಾರಿ ತಂದೆಯ ಕೊಲೆ ಯತ್ನಮಾಡಿ ಠಾಣೆ ಮೆಟ್ಟಿಲೇರಿದ್ದ. ಆ ವೇಳೆ ಆತನ ಅನಾರೋಗ್ಯ ಪ್ರಮಾಣಪತ್ರ ತೋರಿಸಿ ತಾಯಿ ಠಾಣೆಯಿಂದ ಬಿಡಿಸಿಕೊಂಡು ಬಂದಿದ್ದರು. ಆರೋಪಿ ಮಾನಸಿಕ ಅಸ್ವಸ್ಥನಲ್ಲ ಆತ ಫಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...