ಅಯೋಧ್ಯೆ ವಿಚಾರದಲ್ಲಿ ಸುಪ್ರೀಂನಲ್ಲಿ ವಾದ ಮಂಡಿಸಿದ ಕರಾವಳಿ ಯುವ ವಕೀಲರು ಇವರೇ..!

Date:

ಸುಪ್ರೀಕೋರ್ಟ್ ಇಡೀ ದೇಶ ಬಹು ಕಾಲದಿಂದ ಕಾಯುತ್ತಿದ್ದ ಅಯೋಧ್ಯಾ ಮಹಾ ತೀರ್ಪನ್ನು ಶನಿವಾರ ಪ್ರಕಟಿಸಿದೆ. ಈ ಐತಿಹಾಸಿಕ ತೀರ್ಪು ಪ್ರಕಟಿಸಿದ ಪಂಚ ಸದಸ್ಯ ಪೀಠದಲ್ಲಿ ಮೂಡಬಿದಿರೆ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಹಾಗೆಯೇ ಈ ಐತಿಹಾಸಿಕ ವಿಚಾರಕ್ಕೆ ಸಂಬಂಧಿಸಿದಂತೆ ಕರಾವಳಿಯ ಇಬ್ಬರು ಯುವ ವಕೀಲರು ಬಾಬರಿ ಮಸೀದಿ ಪರ ವಕಾಲತ್ತು ನಡೆಸಿದ್ದರು ಎಂಬುದು ಗಮನಾರ್ಹ.

ಬಾಬರಿ ಮಸೀದಿ ಪರ ವಾದ ನಡೆಸಿದ ಡಾ ರಾಜೀವ್ ಧವನ್, ಮೀನಾಕ್ಷಿ ಅರೋರಾ ಮತ್ತು ಧಪರುಲ್ಲಾ ಜೀಲಾನಿಯವರನ್ನೊಳಗೊಂಡ ತಂಡದಲ್ಲಿ ಉಪ್ಪಿನಂಗಡಿಯ ಹಿರೇಬಂಡಾಡಿ ನಿವಾಸಿ ದಿ ಯೂಸಫ್ ಎಂಬುವವರ ಪುತ್ರ ಅಬ್ದುಲ್ ರಹಿಮಾನ್, ಸುಳ್ಯ ಬಳಿಯ ಗಾಂಧಿನಗರ ಕಲ್ಲುಮುಟ್ಟು ನಿವಾಸಿ ಅಬೂಬಕ್ಕರ್ ಪುತ್ರ ಶರೀಫ್ ಇದ್ದರು.

ಪುತ್ತೂರು ನ್ಯಾಯಾಲಯದಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ ಅಬ್ದುಲ್ ರಹಿಮಾನ್, ಬಳಿಕ ಸುಪ್ರೀಂಕೋರ್ಟಲ್ಲಿ ವಕೀಲರಾಗಿ ಸೇವೆಗೆ ಸೇರಿದವರು. ಅದೇರೀತಿ ಶರೀಫ್ ಸುಳ್ಯದ ಗಾಂಧಿನಗರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿ, ಸುಳ್ಯ ಸರಕಾರಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ, ಸುಳ್ಯದ ಎನ್ ಎಂ ಸಿಯಲ್ಲಿ ಪದವಿ, ಕೆವಿಜಿಯಲ್ಲಿ ಎಲ್ ಎಲ್ ಬಿ ಮುಗಿಸಿಕೊಂಡಿದ್ದಾರೆ. 2018ರ ಫೆಬ್ರವರಿಯಿಂದ ಸುಪ್ರೀಂಕೋರ್ಟಲ್ಲಿ ವಕೀಲರಾಗಿ ಸೇವೆಸಲ್ಲಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...