ಅಯೋಧ್ಯೆ ವಿಚಾರದಲ್ಲಿ ಸುಪ್ರೀಂನಲ್ಲಿ ವಾದ ಮಂಡಿಸಿದ ಕರಾವಳಿ ಯುವ ವಕೀಲರು ಇವರೇ..!

Date:

ಸುಪ್ರೀಕೋರ್ಟ್ ಇಡೀ ದೇಶ ಬಹು ಕಾಲದಿಂದ ಕಾಯುತ್ತಿದ್ದ ಅಯೋಧ್ಯಾ ಮಹಾ ತೀರ್ಪನ್ನು ಶನಿವಾರ ಪ್ರಕಟಿಸಿದೆ. ಈ ಐತಿಹಾಸಿಕ ತೀರ್ಪು ಪ್ರಕಟಿಸಿದ ಪಂಚ ಸದಸ್ಯ ಪೀಠದಲ್ಲಿ ಮೂಡಬಿದಿರೆ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಹಾಗೆಯೇ ಈ ಐತಿಹಾಸಿಕ ವಿಚಾರಕ್ಕೆ ಸಂಬಂಧಿಸಿದಂತೆ ಕರಾವಳಿಯ ಇಬ್ಬರು ಯುವ ವಕೀಲರು ಬಾಬರಿ ಮಸೀದಿ ಪರ ವಕಾಲತ್ತು ನಡೆಸಿದ್ದರು ಎಂಬುದು ಗಮನಾರ್ಹ.

ಬಾಬರಿ ಮಸೀದಿ ಪರ ವಾದ ನಡೆಸಿದ ಡಾ ರಾಜೀವ್ ಧವನ್, ಮೀನಾಕ್ಷಿ ಅರೋರಾ ಮತ್ತು ಧಪರುಲ್ಲಾ ಜೀಲಾನಿಯವರನ್ನೊಳಗೊಂಡ ತಂಡದಲ್ಲಿ ಉಪ್ಪಿನಂಗಡಿಯ ಹಿರೇಬಂಡಾಡಿ ನಿವಾಸಿ ದಿ ಯೂಸಫ್ ಎಂಬುವವರ ಪುತ್ರ ಅಬ್ದುಲ್ ರಹಿಮಾನ್, ಸುಳ್ಯ ಬಳಿಯ ಗಾಂಧಿನಗರ ಕಲ್ಲುಮುಟ್ಟು ನಿವಾಸಿ ಅಬೂಬಕ್ಕರ್ ಪುತ್ರ ಶರೀಫ್ ಇದ್ದರು.

ಪುತ್ತೂರು ನ್ಯಾಯಾಲಯದಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ ಅಬ್ದುಲ್ ರಹಿಮಾನ್, ಬಳಿಕ ಸುಪ್ರೀಂಕೋರ್ಟಲ್ಲಿ ವಕೀಲರಾಗಿ ಸೇವೆಗೆ ಸೇರಿದವರು. ಅದೇರೀತಿ ಶರೀಫ್ ಸುಳ್ಯದ ಗಾಂಧಿನಗರದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿ, ಸುಳ್ಯ ಸರಕಾರಿ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ, ಸುಳ್ಯದ ಎನ್ ಎಂ ಸಿಯಲ್ಲಿ ಪದವಿ, ಕೆವಿಜಿಯಲ್ಲಿ ಎಲ್ ಎಲ್ ಬಿ ಮುಗಿಸಿಕೊಂಡಿದ್ದಾರೆ. 2018ರ ಫೆಬ್ರವರಿಯಿಂದ ಸುಪ್ರೀಂಕೋರ್ಟಲ್ಲಿ ವಕೀಲರಾಗಿ ಸೇವೆಸಲ್ಲಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...