ಅಯ್ಯೋ ವಿಚಿತ್ರ! ಮಹಿಳೆ ಕೊಂದು 2 ಕಾಲಿನ ಜೊತೆ ಕೊಲೆಗಾರರು ಪರಾರಿ

Date:

ಶಸ್ತ್ರಚಿಕಿತ್ಸೆ ಮೂಲಕ ಮಂಡಿಗೆ ಅಳವಡಿಸಿದ್ದ ಸ್ಟೀಲ್ ಚಿಪ್ಪುಗಳನ್ನು ಕದಿಯಲು ದುಷ್ಕರ್ಮಿಗಳು ಮಹಿಳೆಯೊಬ್ಬಳನ್ನು ಕೊಂದು ಆಕೆಯ ಎರಡು ಕಾಲುಗಳನ್ನು ಕದ್ದೊಯ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಜೈಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಖತೇಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ಮಹಿಳೆ ಗೀತಾ ದೇವಿ ಅವರನ್ನು ಬರ್ಬರವಾಗಿ ಹೊಡೆದು ಹತ್ಯೆ ಮಾಡಲಾಗಿದೆ.

ಗೀತಾ ದೇವಿ ಹಸು ಮೇಯಿಸಲು ಕಾಡಿಗೆ ಹೋದಾಗ ದುಷ್ಕರ್ಮಿಗಳು ದಾಳಿ ಮಾಡಿ ಹೊಡೆದು ಕೊಂದಿದ್ದಾರೆ ಎಂದು ಜಮ್ವಾ ರಾಮ್ ಘಡ್ ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನದ ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮಂಡಿಗೆ ಭಾರೀ ಬೆಲೆಯ ಮಂಡಿ ಚಿಪ್ಪುಗಳನ್ನು ಹಾಕಿಸಿಕೊಳ್ಳುವುದು ವಾಡಿಕೆ. ಈ ಸ್ಟೀಲ್ ಗಳನ್ನು ಕದಿಯುವ ಉದ್ದೇಶದಿಂದ ಆಕೆಯನ್ನು ಕೊಂದು ದುಷ್ಕರ್ಮಿಗಳು ಕಾಲುಗಳನ್ನು ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...