ಅಯ್ಯೋ ವಿಧಿಯೇ; ಬೆಂಗಳೂರಿನಲ್ಲಿ ರಸ್ತೆ ಕಾಣಿಸದೇ ಹಾರಿಹೋಯ್ತು ಮೂವರ ಪ್ರಾಣ

Date:

ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯ ಅವಾಂತರಗಳು ಮುಂದುವರಿದಿವೆ.

ಭಾರೀ ಮಳೆ ಆರ್ಭಟಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯ ಬೆಟ್ಟಹಲಸೂರು ಕ್ರಾಸ್ ಬಳಿ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ 9 ಗಂಟೆಗೆ ನಡೆದಿದೆ.

 

ದೇವನಹಳ್ಳಿ ಕಡೆಯಿಂದ ಬೆಂಗಳೂರಿಗೆ ಕಾರು ಬರುತ್ತಿತ್ತು. ಈ ವೇಳೆ ಬೆಟ್ಟಹಲಸೂರು ಬಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ಮೂವರು ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಳೆಯಿಂದಾಗಿ ರಸ್ತೆ ಕಾಣದೆ ಡಿವೈಡರ್‍ಗೆ ಡಿಕ್ಕಿ ಹೊಡೆದು ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಕಾರು ಬಿದ್ದಿದೆ.

ಮಳೆ ಹಿನ್ನೆಲೆ ಕಾರಿನಲ್ಲಿದ್ದ ಮೃತದೇಹ ತೆಗೆಯಲು ಹರಸಾಹಸ ಪಡಬೇಕಾಯಿತು. ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...