ಅಯ್ಯೋ ವಿಧಿಯೇ; ಬೆಂಗಳೂರಿನಲ್ಲಿ ರಸ್ತೆ ಕಾಣಿಸದೇ ಹಾರಿಹೋಯ್ತು ಮೂವರ ಪ್ರಾಣ

0
43

ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯ ಅವಾಂತರಗಳು ಮುಂದುವರಿದಿವೆ.

ಭಾರೀ ಮಳೆ ಆರ್ಭಟಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯ ಬೆಟ್ಟಹಲಸೂರು ಕ್ರಾಸ್ ಬಳಿ ರಸ್ತೆ ಕಾಣದೆ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ 9 ಗಂಟೆಗೆ ನಡೆದಿದೆ.

 

ದೇವನಹಳ್ಳಿ ಕಡೆಯಿಂದ ಬೆಂಗಳೂರಿಗೆ ಕಾರು ಬರುತ್ತಿತ್ತು. ಈ ವೇಳೆ ಬೆಟ್ಟಹಲಸೂರು ಬಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ಮೂವರು ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಳೆಯಿಂದಾಗಿ ರಸ್ತೆ ಕಾಣದೆ ಡಿವೈಡರ್‍ಗೆ ಡಿಕ್ಕಿ ಹೊಡೆದು ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಕಾರು ಬಿದ್ದಿದೆ.

ಮಳೆ ಹಿನ್ನೆಲೆ ಕಾರಿನಲ್ಲಿದ್ದ ಮೃತದೇಹ ತೆಗೆಯಲು ಹರಸಾಹಸ ಪಡಬೇಕಾಯಿತು. ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here