ಅಯ್ಯೋ ವಿಧಿಯೇ, ಮತ್ತೊಬ್ಬ ಅಪ್ಪು ಅಭಿಮಾನಿ ಆತ್ಮಹತ್ಯೆ

Date:

ನಟ ಪುನೀತ್ ರಾಜ್​ಕುಮಾರ್​ ಸಾವಿನಿಂದ ಮನನೊಂದು, ಅಭಿಮಾನಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಾಂಪುರದಲ್ಲಿ ನಡೆದಿದೆ. ಶರತ್ (30) ಮನೆಯಲ್ಲಿ ನೇಣಿಗೆ ಶರಣಾದ ಪುನೀತ್ ಅಭಿಮಾನಿಯಾಗಿದ್ದಾರೆ.

ನಿನ್ನೆಯಿಂದಲೂ ಪುನೀತ್ ರಾಜ್​​ಕುಮಾರ್ ಸಾವಿನ ಸುದ್ದಿ ಕೇಳಿ ಅಳುತ್ತಿದ್ದ ಶರತ್​ನನ್ನು, ಮನೆಯವರು ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

 

ಶರತ್ ಚಿಕ್ಕಮಗಳೂರು ನಗರದಲ್ಲಿ ಹೋಟೆಲ್‍ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ. ಶರತ್​​ಗೆ ಮದುವೆಯಾಗಿದ್ದು ಒಂದು ಮಗುವಿದ್ದು, ಪತ್ನಿ ಎಂಟು ತಿಂಗಳ ಗರ್ಭೀಣಿ. ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...