ಅಲೋವೆರಾ ಬಗ್ಗೆ ನಿಮಗೆ ಗೊತ್ತಿಲ್ಲದ ಇಂಟ್ರೆಸ್ಟಿಂಗ್ ವಿಚಾರ ಇಲ್ಲಿದೆ!

Date:

ಎಲ್ಲೆಡೆ ವ್ಯಾಪಕವಾಗಿ ಬಳಸಲ್ಪಡುವ ಸಸ್ಯ ಪ್ರಭೇದಗಳಲ್ಲಿ ಅಲೋವೆರಾ ಕೂಡ ಒಂದು. ದೇಹದ ಆಂತರಿಕ ಮತ್ತು ಬಾಹ್ಯ ಚಿಕಿತ್ಸೆಗೆ ಅಲೋವೆರಾ ತುಂಬಾ ಪ್ರಯೋಜನಕಾರಿ ಆಗಿದೆ.

ಅನೇಕ ಮಂದಿ ಮನೆಯಲ್ಲಿ ಅಲೋವೆರಾ ಗಿಡವನ್ನು ಬೆಳೆಸಿದ್ದಾರೆ. ಆದರೆ ಈ ಅಲೋವೆರಾ ಗಿಡವನ್ನು ನಾವು ಬಳಸುತ್ತೇವೆಯೇ ಎಂಬುವುದೇ ದೊಡ್ಡ ಪ್ರಶ್ನೆ ಆಗಿದೆ. ಅಲೋವೆರಾವನ್ನು ಬಳಸಬೇಕಾದರೆ, ಮೊದಲು ನಾವು ಅಲೋವೆರಾದಿಂದ ಸಿಗುವ ಪ್ರಯೋಜನಗಳೇನು ಎಂಬುವುದನ್ನು ತಿಳಿದುಕೊಳ್ಳಬೇಕು. ಹಾಗಾದರೆ ಅಲೋವೆರಾದಿಂದ ಆಗುವ ಲಾಭಗಖೇನು ಎಂದು ತಿಳಿದುಕೊಳ್ಳೋಣ ಬನ್ನಿ.

ನಾವು ಅಲೋವೆರಾವನ್ನು ಕತ್ತರಿಸಿದಾಗ, ಹಳದಿ, ಕಹಿ ದ್ರವವು ಹೊರಬರುತ್ತದೆ. ಇದನ್ನು ಇಂಗ್ಲಿಷ್ನಲ್ಲಿ ರಬ್ಬರ್ ಹಾಲು ಅಥವಾ ಲ್ಯಾಟೆಕ್ಸ್ ಎಂದು ಕರೆಯಲಾಗುತ್ತದೆ. ಈ ಲ್ಯಾಟೆಕ್ಸ್ ವಿಷಕಾರಿಯಾಗಿದೆ. ಹಾಗಾಗಿ ಅಲೋವೆರಾವನ್ನು ಬಳಸುವಾಗ ನಾವು ತುಂಬಾ ಜಾಗರೂಕರಾಗಿರಬೇಕು. ಅಲೋವೆರಾ ಎಲೆಯನ್ನು ಕತ್ತರಿಸಿದ ಬಳಿಕ ಅದನ್ನು ನೀರಿನಲ್ಲಿ ಅರ್ಧ ಗಂಟೆಯವರೆಗೆ ನೆನೆಸಿ ನಂತರ ಬಳಸಿ.

ಇಂದು ಅಂಗಡಿಗಳಲ್ಲಿ ಲಭ್ಯವಿರುವ ಅನೇಕ ಸೌಂದರ್ಯವರ್ಧಕ ಉತ್ಪನ್ನಗಳನ್ನು ಅಲೋವೆರಾದಿಂದ ತಯಾರಿಸಲಾಗಿದೆ. ಲೋಷನ್ ಮತ್ತು ಕ್ರೀಮ್ಗಳಿಗೆ ಸೇರಿಸಲಾದ ಅಲೋವೆರಾ ಚರ್ಮದ ಕಾಂತಿಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದೆ. ತಾಜಾ ಅಲೋವೆರಾದ ನೇರ ಬಳಕೆಯು ಕೃತಕ ಪದಾರ್ಥಗಳಿಗಿಂತ ಯಾವುದೇ ಅಡ್ಡಪರಿಣಾಮಗಳಿಲ್ಲದೇ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ.

ಅಲೋವೆರಾ ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಅಲೋವೆರಾದಲ್ಲಿ ವಿಟಮಿನ್ ಎ, ಸಿ, ಇ ಮತ್ತು ಬಿ ಕಾಂಪ್ಲೆಕ್ಸ್ ಮತ್ತು ಖನಿಜಗಳಾದ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಸತು ಮತ್ತು ಅಮೈನೋ ಆಮ್ಲಗಳು ಸಮೃದ್ಧವಾಗಿವೆ.

ಅಲೋವೆರಾದಿಂದ ಲ್ಯಾಟೆಕ್ಸ್ ಅನ್ನು ಮಲಬದ್ಧತೆಗೆ ಚಿಕಿತ್ಸೆ ನೀಡಲು ನೈಸರ್ಗಿಕ ಪರಿಹಾರವಾಗಿ ಬಳಸಬಹುದು

ಅಲೋವೆರಾವು ಪೋಷಕಾಂಶಗಳಿಂದ ಸಮೃದ್ಧವಾಗಿರುವುದರ ಜೊತೆಗೆ, ಉತ್ಕರ್ಷಣ ನಿರೋಧಕಗಳಲ್ಲಿಯೂ ಸಮೃದ್ಧವಾಗಿದೆ. ಇವುಗಳು ನಮ್ಮ ದೇಹದಲ್ಲಿರುವ ಜೀವಕೋಶಗಳಿಗೆ ಹಾನಿಯನ್ನುಂಟು ಮಾಡುವ ಫ್ರಿ ರಾಡಿಕಲ್ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿವೆ

ಅಲೋವೆರಾ ಗಿಡವನ್ನು ನಮ್ಮ ಮನೆಯಲ್ಲಿ ಬೆಳೆಸುವುದು ತುಂಬಾ ಸುಲಭ. ಇದಕ್ಕೆ ಹೆಚ್ಚಿನ ಶ್ರಮ ಪಡುವ ಅಗತ್ಯವಿಲ್ಲ. ಅಲೋವೆರಾವನ್ನು ಒಳಾಂಗಣ ಮತ್ತು ಹೊರಾಂಗಣದಲ್ಲಿ ಮುಕ್ತವಾಗಿ ಬೆಳೆಸಬಹುದು.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...