ಅಲ್ಲಿಗೆ ರಾಜೀನಾಮೆ ನೀಡಿ, ಇಲ್ಲಿ ಅಧಿಕಾರ ಸ್ವೀಕರಿಸಬೇಕಿದೆ ಕನ್ನಡಿಗ ರಾಹುಲ್ ದ್ರಾವಿಡ್ ..!

Date:

ಭಾರತ ತಂಡದ ಮಾಜಿ ನಾಯಕ , ಕಿರಿಯರ ಗುರು, ಹೆಮ್ಮೆಯ ಕನ್ನಡಿಗ ರಾಹುಲ್ ದ್ರಾವಿಡ್ ಸಾಮಾನ್ಯವಾಗಿ ಯಾವುದೇ ವಿವಾದದಲ್ಲಿ ಸಿಲುಕಿಕೊಂಡವರಲ್ಲ. ಈಗ ಅವರು ಸ್ವಹಿತಾಸಕ್ತಿ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಮುಖ್ಯಸ್ಥ ಸ್ಥಾನದ ಅಧಿಕಾರ ಸ್ವೀಕರಿಸಲು ವಿಳಂಬವಾಗುತ್ತಿದೆ ಎನ್ನಲಾಗಿದೆ.


ಪೂರ್ವನಿಗದಿಯಂತೆ ದ್ರಾವಿಡ್ ಜುಲೈ 1ರಂದೇ ಅಧಿಕಾರ ಸ್ವೀಕರಿಸಬೇಕಿತ್ತು. ದ್ರಾವಿಡ್ ಇಂಡಿಯಾ ಸಿಮೆಂಟ್ಸ್​ನಲ್ಲಿ ಉದ್ಯೋಗಿಯಾಗಿರುವುದರಿಂದ ಅದು ಸಾಧ್ಯವಾಗಿಲ್ಲ. ಬಿಸಿಸಿಐ ನಿಯಮದಂತೆ ಏಕಕಾಲದಲ್ಲಿ ಎರಡು ಕಡೆ ಸಂಬಳ ಪಡೆಯುವಂತಿಲ್ಲ. ಇದು ದ್ರಾವಿಡ್ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಆದ್ದರಿಂದ ದ್ರಾವಿಡ್ ಇಂಡಿಯಾ ಸಿಮೆಂಟ್ಸ್​ಗೆ ರಾಜೀನಾಮೆ ಸಲ್ಲಿಸಿದ ಬಳಿಕವೇ ಎನ್​ಸಿಎ ಅಧಿಕಾರ ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ.
ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಸದಸ್ಯ ಸಂಜೀವ್ ಗುಪ್ತಾ ಅವರು ನೀಡಿದ್ದ ದೂರಿನ ಅನ್ವಯ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಈಗಾಗಲೆ ಹಿತಾಸಕ್ತಿ ಸಂಘರ್ಷ ಆರೋಪದ ವಿಚಾರಣೆಯನ್ನು ಎದುರಿಸಿದ್ದಾರೆ. ದ್ರಾವಿಡ್ ವಿರುದ್ಧವೂ ಸಂಜೀವ್ ಗುಪ್ತಾ ಜೂನ್ 30ರಂದು ಬಿಸಿಸಿಐ ಒಂಬುಡ್ಸ್​ಮನ್ ಡಿಕೆ ಜೈನ್ ಹಾಗೂ ಕ್ರಿಕೆಟ್ ಆಡಳಿತಾಧಿಕಾರಿಗಳ ಸಮಿತಿಗೆ (ಸಿಒಎ) ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದ್ರಾವಿಡ್​ ಕೂಡ ಸ್ವ ಹಿತಾಸಕ್ತಿ ಸಂಘರ್ಷ ಎದುರಿಬೇಕಾಗಿ ಬಂದಿದೆ.

Share post:

Subscribe

spot_imgspot_img

Popular

More like this
Related

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...