ಅಲ್ಲಿಗೆ ರಾಜೀನಾಮೆ ನೀಡಿ, ಇಲ್ಲಿ ಅಧಿಕಾರ ಸ್ವೀಕರಿಸಬೇಕಿದೆ ಕನ್ನಡಿಗ ರಾಹುಲ್ ದ್ರಾವಿಡ್ ..!

Date:

ಭಾರತ ತಂಡದ ಮಾಜಿ ನಾಯಕ , ಕಿರಿಯರ ಗುರು, ಹೆಮ್ಮೆಯ ಕನ್ನಡಿಗ ರಾಹುಲ್ ದ್ರಾವಿಡ್ ಸಾಮಾನ್ಯವಾಗಿ ಯಾವುದೇ ವಿವಾದದಲ್ಲಿ ಸಿಲುಕಿಕೊಂಡವರಲ್ಲ. ಈಗ ಅವರು ಸ್ವಹಿತಾಸಕ್ತಿ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ) ಮುಖ್ಯಸ್ಥ ಸ್ಥಾನದ ಅಧಿಕಾರ ಸ್ವೀಕರಿಸಲು ವಿಳಂಬವಾಗುತ್ತಿದೆ ಎನ್ನಲಾಗಿದೆ.


ಪೂರ್ವನಿಗದಿಯಂತೆ ದ್ರಾವಿಡ್ ಜುಲೈ 1ರಂದೇ ಅಧಿಕಾರ ಸ್ವೀಕರಿಸಬೇಕಿತ್ತು. ದ್ರಾವಿಡ್ ಇಂಡಿಯಾ ಸಿಮೆಂಟ್ಸ್​ನಲ್ಲಿ ಉದ್ಯೋಗಿಯಾಗಿರುವುದರಿಂದ ಅದು ಸಾಧ್ಯವಾಗಿಲ್ಲ. ಬಿಸಿಸಿಐ ನಿಯಮದಂತೆ ಏಕಕಾಲದಲ್ಲಿ ಎರಡು ಕಡೆ ಸಂಬಳ ಪಡೆಯುವಂತಿಲ್ಲ. ಇದು ದ್ರಾವಿಡ್ ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಆದ್ದರಿಂದ ದ್ರಾವಿಡ್ ಇಂಡಿಯಾ ಸಿಮೆಂಟ್ಸ್​ಗೆ ರಾಜೀನಾಮೆ ಸಲ್ಲಿಸಿದ ಬಳಿಕವೇ ಎನ್​ಸಿಎ ಅಧಿಕಾರ ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ.
ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಸದಸ್ಯ ಸಂಜೀವ್ ಗುಪ್ತಾ ಅವರು ನೀಡಿದ್ದ ದೂರಿನ ಅನ್ವಯ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಈಗಾಗಲೆ ಹಿತಾಸಕ್ತಿ ಸಂಘರ್ಷ ಆರೋಪದ ವಿಚಾರಣೆಯನ್ನು ಎದುರಿಸಿದ್ದಾರೆ. ದ್ರಾವಿಡ್ ವಿರುದ್ಧವೂ ಸಂಜೀವ್ ಗುಪ್ತಾ ಜೂನ್ 30ರಂದು ಬಿಸಿಸಿಐ ಒಂಬುಡ್ಸ್​ಮನ್ ಡಿಕೆ ಜೈನ್ ಹಾಗೂ ಕ್ರಿಕೆಟ್ ಆಡಳಿತಾಧಿಕಾರಿಗಳ ಸಮಿತಿಗೆ (ಸಿಒಎ) ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದ್ರಾವಿಡ್​ ಕೂಡ ಸ್ವ ಹಿತಾಸಕ್ತಿ ಸಂಘರ್ಷ ಎದುರಿಬೇಕಾಗಿ ಬಂದಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...