ಅಶ್ವಗಂಧ ಬ್ಯಾನ್ ಮಾಡಿದ ಸರ್ಕಾರ !

Date:

ಭಾರತೀಯ ಆಯುರ್ವೇದ ಪರಂಪರೆಯಲ್ಲಿ ಹಾಗೂ ಚಿಕಿತ್ಸಾ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದ ಅಶ್ವಗಂಧವನ್ನು ಡೆನ್ಮಾರ್ಕ್ ಸರ್ಕಾರ ನಿಷೇಧಿಸಿದೆ. 2020ರ ಮೇ ತಿಂಗಳಲ್ಲಿ ‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ಕೊಟ್ಟ ವರದಿಯ ಆಧಾರದ ಮೇಲೆ ಈ ನಿರ್ಧಾರ ಹೊರಬಿದ್ದಿದೆ. ಮನುಷ್ಯನ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಆರೋಪದಲ್ಲಿ ಅಶ್ವಗಂಧವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ವರದಿಯಿಂದಾಗಿ ಇದೀಗ ಸ್ವಿಡನ್, ಫಿನ್‌ಲ್ಯಾಂಡ್, ಆಸ್ಟ್ರೇಲಿಯಾ, ನೆದರ್‌ಲ್ಯಾಂಡ್, ಫ್ರಾನ್ಸ್, ಟರ್ಕಿ ಹಾಗೂ ಯುರೋಪಿಯನ್ ಯೂನಿಯನ್‌ನಲ್ಲಿಯೂ ಕಳವಳ ವ್ಯಕ್ತವಾಗಿದೆ.

ಲೈಂಗಿಕ ಹಾರ್ಮೋನು ಮತ್ತು ಸಂತಾನೋತ್ಪತ್ತಿಯ ಮೇಲೆ ಅಶ್ವಗಂಧ ನಕರಾತ್ಮಕ ಪರಿಣಾಮ ಬೀರುತ್ತದೆ. ಅಶ್ವಗಂಧ ಗರ್ಭಪಾತಕ್ಕೂ ಕಾರಣವಾಗಲಿದೆ ಎಂದು ‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇಷ್ಟೇ ಅಲ್ಲದೇ, ಅಶ್ವಗಂಧವು ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರಬಹುದು. ಥೈರಾಯ್ಡ್ ಗ್ರಂಥಿ ಮೇಲೆ ಹಾಗೂ ಲಿವರ್ ಸಮಸ್ಯೆ ಉಂಟುಮಾಡಬಹುದು ಎಂದು ಆರೋಪ ಮಾಡಲಾಗಿದೆ.

ಡೆನ್ಮಾರ್ಕ್​ನ ನಿರ್ಧಾರಕ್ಕೆ ಮತ್ತು ‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ವರದಿಗೆ ಭಾರತದ ಆಯುಷ್ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ವರದಿಯನ್ನು ಮರುಪರಿಶೀಲಿಸುವ ಅಗತ್ಯ ಇದೆ ಎಂದು ಆಯುಷ್ ಸಚಿವಾಲಯ ಹೇಳಿದೆ. ಅಶ್ವಗಂಧದ ಸುರಕ್ಷತೆ ಬಗ್ಗೆ 400 ಪುಟಗಳ ದಾಖಲೆಗಳಿವೆ. ವರದಿಯಲ್ಲಿ ವೈಜ್ಞಾನಿಕ ಕೊರತೆ ಇರುವುದು ಎದ್ದು ಕಾಣಿಸುತ್ತಿದೆ ಎಂದು ಡೆನ್ಮಾರ್ಕ್ ಮಾಡಿರುವ ಆರೋಪವನ್ನು ಆಯುಷ್ ಸಚಿವಾಲಯ ತಳ್ಳಿ ಹಾಕಿದೆ.

ಆಯುಷ್ ಸಚಿವಾಲಯದ ಪ್ರಕಾರ, ಭಾರತ ವಿಶ್ವದ ಅತಿದೊಡ್ಡ ಅಶ್ವಗಂಧ ಉತ್ಪಾದಕ ದೇಶ. ಒಂದು ವರ್ಷಕ್ಕೆ 4 ಸಾವಿರ ಟನ್ ಅಶ್ವಗಂಧದ ಬೇರುಗಳನ್ನು ಉತ್ಪಾದನೆ ಮಾಡುತ್ತದೆ. ವಿವಿಧ ದೇಶಗಳಿಗೆ ಅಶ್ವಗಂಧ ಪೂರೈಕೆ ಮಾಡುವ ಪೈಕಿ ಭಾರತದ್ದೇ ಶೇಕಡಾ 42ರಷ್ಟು ಕೊಡುಗೆ ಇದೆ. ಹೀಗಿರುವಾಗ ಡೆನ್ಮಾರ್ಕ್ ದೇಶದ ನಿರ್ಧಾರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...