ಆಂಧ್ರದಲ್ಲಿ ಪುನೀತ್ ಪ್ರತಿಮೆಗಳಿಗೆ ಭಾರೀ ಬೇಡಿಕೆ

Date:

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಅಕಾಲಿಕ ಮರಣ ವಾರ್ತೆಯನ್ನು ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್ ನಿಧನದಿಂದ ಅವರ ಅಭಿಮಾನಿಗಳು ಶಾಕ್​ಗೆ ಒಳಗಾಗಿದ್ದಾರೆ. ಅವರು ಮೃತಪಟ್ಟು ಒಂದೂವರೆ ತಿಂಗಳು ಕಳೆಯುತ್ತಾ ಬಂದರೂ ನೋವು ಎಂಬುದು ಕಿಂಚಿತ್ತೂ ಕಡಿಮೆ ಆಗುತ್ತಿಲ್ಲ.

ಪುನೀತ್​ಗೆ ಕರ್ನಾಟಕ ಮಾತ್ರವಲ್ಲದೆ ಪರಭಾಷೆಯಲ್ಲಿ ಸಾಕಷ್ಟು ಅಭಿಮಾನಿಗಳಿದ್ದಾರೆ. ಬೇರೆ ರಾಜ್ಯಗಳಲ್ಲೂ ಪುನೀತ್​ಗೆ ನಮನ ಸಲ್ಲಿಸುವ ಕಾರ್ಯ ನಡೆದಿದೆ. ಕನ್ನಡ ಚಿತ್ರರಂಗ​ ಮಾತ್ರವಲ್ಲದೆ ಪರಭಾಷೆಯಲ್ಲಿರುವ ಅಭಿಮಾನಿಗಳು ಕೂಡ ಪುನೀತ್​ ಅವರನ್ನು ನೆನೆಯುತ್ತಿದ್ದಾರೆ. ಅವರ ಮೇಲಿನ ಅಭಿಮಾನವನ್ನು ನಾನಾ ರೀತಿಯಲ್ಲಿ ವ್ಯಕ್ತಪಡಿಸಲಾಗುತ್ತಿದೆ. ಕೆಲವರು ಪುನೀತ್ ದಾರಿಯಲ್ಲಿ ಸಾಗಿ ಸಮಾಜ ಸೇವೆ ಮಾಡುತ್ತಿದ್ದಾರೆ. ಸಾಕಷ್ಟು ಮಂದಿ ಆಂಧ್ರ ಪ್ರದೇಶದಲ್ಲಿ ಪುನೀತ್​ ಅವರ ಪ್ರತಿಮೆ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ, ಅಲ್ಲಿನ ಶಿಲ್ಪಿಗಳಿಗೆ ಸಾಕಷ್ಟು ಆರ್ಡರ್​ಗಳು ಬರುತ್ತಿವೆ.

ಪುನೀತ್ ರಾಜ್​ಕುಮಾರ್​ ಭೌತಿಕವಾಗಿ ನಮ್ಮ ನಡುವೆ ಇಲ್ಲದಿದ್ದರೂ ಕೋಟಿ ಜನರ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ಒಳ್ಳೆಯತನ, ಅವರು ಕೈಗೊಂಡ ಸೇವಾ ಕಾರ್ಯಕ್ರಮಗಳು ಅವರನ್ನು ಈಗಲೂ ನೆನಪಿಸಿಕೊಳ್ಳುವಂತೆ ಮಾಡಿದೆ. ಎಲ್ಲಾ ಏರಿಯಾಗಳಲ್ಲಿ ಪುನೀತ್ ಪ್ರತಿಮೆ ಸ್ಥಾಪಿಸಲು ಆಸಕ್ತಿ ತೋರಿದ್ದಾರೆ. ಆಂಧ್ರ ಪ್ರದೇಶದಲ್ಲೂ ಈ ರೀತಿ ಮಾಡಲಾಗುತ್ತಿದೆ. ಇಲ್ಲಿನ ಗುಂಟೂರು ಜಿಲ್ಲೆಯ ತೆನಾಲಿ ಜಿಲ್ಲೆಯ ಶಿಲ್ಪಿ ಕಾಟೂರಿ ವೆಂಕಟೇಶ್ವರರಾವ್ ಅವರಿಗೆ ಪುನೀತ್​ ಪ್ರತಿಮೆ ನಿರ್ಮಾಣಕ್ಕೆ ಭಾರೀ ಆರ್ಡರ್​ಗಳು ಬರುತ್ತಿವೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...