ಆಕ್ಸಿಜನ್ ಸಿಗದೇ ಸಾಧು ಕೋಕಿಲ ಪರದಾಟ!

Date:

ಉಪೇಂದ್ರ ಅಭಿನಯದ ಲಗಾಮ್ ಚಿತ್ರದ ಮುಹೂರ್ತ ಸಮಾರಂಭ ಮೊನ್ನೆಯಷ್ಟೇ ನಡೆದಿದೆ. ಮುಹೂರ್ತ ಸಮಾರಂಭದಲ್ಲಿ ಪುನೀತ್ ರಾಜ್ ಕುಮಾರ್ ಅವರು ಕ್ಲ್ಯಾಪ್ ಮಾಡಿ ಚಿತ್ರ ಯಶಸ್ಸು ಗಳಿಸಲಿ ಎಂದು ಕೋರಿದರು. ತುಂಬಾ ವರ್ಷಗಳ ನಂತರ ಸಾಧುಕೋಕಿಲಾ ಅವರು ಲಗಾಮ್ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ.

 

 

ಚಿತ್ರದ ಮುಹೂರ್ತಕ್ಕೆ ಬಂದಿದ್ದ ಅವರು ಮಾಧ್ಯಮದವರ ಜೊತೆ ಮಾತನಾಡುವಾಗ ತಮಗೆ ಆದ ಕಷ್ಟದ ಅನುಭವವನ್ನು ಹಂಚಿಕೊಂಡಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ಅವರು ಎದುರಿಸಿದ ಕಷ್ಟವನ್ನು ಸಾಧುಕೋಕಿಲಾ ಹಂಚಿಕೊಂಡರು. ಸಾಧು ಕೋಕಿಲಾ ಅವರ ಅಣ್ಣನ ಮಗನಿಗೆ ಕೊರೋನಾವೈರಸ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು ಈ ಸಂದರ್ಭದಲ್ಲಿ ಒಂದೇ ಒಂದು ಆಕ್ಸಿಜನ್ ಪಡೆದುಕೊಳ್ಳಲು ಇಡೀ ದಿನ ಸಾಧುಕೋಕಿಲಾ ಪರದಾಡಿದ್ದರಂತೆ.

 

 

ನನ್ನ ಅಣ್ಣನ ಮಗನಿಗೆ ಕೊರೊನಾ ಸೋಂಕು ತಗುಲಿತ್ತು ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದೆವು. ಉಸಿರಾಟದ ಸಮಸ್ಯೆ ಎದುರಾದ್ದರಿಂದ ಆಕ್ಸಿಜನ್ ಗಾಗಿ ಒಂದು ದಿನ ಪೂರ್ತಿ ಅಲೆದಾಡಿದೆ. ಒಬ್ಬ ಸೆಲೆಬ್ರಿಟಿಯಾಗಿ ನನಗೆ ಆಕ್ಸಿಜನ್ ತೆಗೆದುಕೊಳ್ಳಲು ಇಷ್ಟು ಕಷ್ಟ ಆಯಿತು ಎಂದರೆ ಇನ್ನು ಸಾಮಾನ್ಯ ಜನರ ಗತಿಯೇನು? ಕೊರೊನಾ ಸೋಂಕು ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ ದಯವಿಟ್ಟು ಎಚ್ಚರದಿಂದಿರಿ ಎಂದು ಸಾಧು ಕೋಕಿಲಾ ಇದೇ ವೇಳೆ ಕೇಳಿಕೊಂಡರು.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...