ಆತುರವಾಗಿ ಎಸ್ಐಟಿ ರಚಿಸಿ ತಮ್ಮ ಕೊಳಕು ಮುಚ್ಚಿ ಹಾಕಲು ಮುಂದಾಗಿದ್ದಾರೆ !

Date:

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ವಿಚಾರವಾಗಿ ಯಾವ ಹಂತದಲ್ಲಿ ಹೇಗೆ ಹೋರಾಟ ಮಾಡಬೇಕು ಎಂದು ಪಕ್ಷದಲ್ಲಿ ಚರ್ಚಿಸಿದ್ದೇವೆ. ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ವಿಚಾರವಾಗಿ ಯಾವ ಹಂತದಲ್ಲಿ ಹೇಗೆ ಹೋರಾಟ ಮಾಡಬೇಕು ಎಂದು ಪಕ್ಷದಲ್ಲಿ ಚರ್ಚಿಸಿದ್ದೇವೆ. ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ. ಶಾಸಕರೆಲ್ಲರೂ‌ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹೋರಾಟ ಮಾಡುವುದು, ಬಳಿಕ ರಾಜ್ಯಪಾಲರ ಭೇಟಿಯ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಮುಂದುವರೆದು ಮಾತನಾಡಿ, ಈ ಹಣವನ್ನು ತೆಲಂಗಾಣಕ್ಕೆ ಟ್ರಾನ್ಸ್‌ಫರ್ ಮಾಡಿ‌ ಚುನಾವಣೆಗೆ‌ ಬಳಸಿಕೊಂಡಿದ್ದಾರೆ. ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು. ಆತುರವಾಗಿ ಎಸ್ಐಟಿ ರಚಿಸಿ ತಮ್ಮ ಕೊಳಕು ಮುಚ್ಚಿ ಹಾಕಲು ಮುಂದಾಗಿದ್ದಾರೆ ಎಂದು ತಿಳಿಸಿದರು. ಪರಿಷತ್‌ಗೆ ನಡೆಯುವ ಚುನಾವಣೆ ಕುರಿತು ಮಾತನಾಡಿ, ನಮ್ಮ ಮೂವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿದೆ. ಪಕ್ಷಕ್ಕೆ ದುಡಿಯುವವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...