ಆತುರವಾಗಿ ಎಸ್ಐಟಿ ರಚಿಸಿ ತಮ್ಮ ಕೊಳಕು ಮುಚ್ಚಿ ಹಾಕಲು ಮುಂದಾಗಿದ್ದಾರೆ !

Date:

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ವಿಚಾರವಾಗಿ ಯಾವ ಹಂತದಲ್ಲಿ ಹೇಗೆ ಹೋರಾಟ ಮಾಡಬೇಕು ಎಂದು ಪಕ್ಷದಲ್ಲಿ ಚರ್ಚಿಸಿದ್ದೇವೆ. ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅಕ್ರಮದ ವಿಚಾರವಾಗಿ ಯಾವ ಹಂತದಲ್ಲಿ ಹೇಗೆ ಹೋರಾಟ ಮಾಡಬೇಕು ಎಂದು ಪಕ್ಷದಲ್ಲಿ ಚರ್ಚಿಸಿದ್ದೇವೆ. ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ. ಶಾಸಕರೆಲ್ಲರೂ‌ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹೋರಾಟ ಮಾಡುವುದು, ಬಳಿಕ ರಾಜ್ಯಪಾಲರ ಭೇಟಿಯ ಬಗ್ಗೆ ಚರ್ಚಿಸಿದ್ದೇವೆ ಎಂದರು.
ಮುಂದುವರೆದು ಮಾತನಾಡಿ, ಈ ಹಣವನ್ನು ತೆಲಂಗಾಣಕ್ಕೆ ಟ್ರಾನ್ಸ್‌ಫರ್ ಮಾಡಿ‌ ಚುನಾವಣೆಗೆ‌ ಬಳಸಿಕೊಂಡಿದ್ದಾರೆ. ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು. ಆತುರವಾಗಿ ಎಸ್ಐಟಿ ರಚಿಸಿ ತಮ್ಮ ಕೊಳಕು ಮುಚ್ಚಿ ಹಾಕಲು ಮುಂದಾಗಿದ್ದಾರೆ ಎಂದು ತಿಳಿಸಿದರು. ಪರಿಷತ್‌ಗೆ ನಡೆಯುವ ಚುನಾವಣೆ ಕುರಿತು ಮಾತನಾಡಿ, ನಮ್ಮ ಮೂವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾಗಿದೆ. ಪಕ್ಷಕ್ಕೆ ದುಡಿಯುವವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...