ಆನೆ ಹೋಗುವಾಗ ನಾಯಿಗಳು ಬೊಗಳುತ್ತವೆ ! ಎಸ್.ಟಿ. ಸೋಮ ಶೇಖರ್,

Date:

ನಾವು ಕೂಡ ಮೈತ್ರಿಯನ್ನು ಹಿಡಿದುಕೊಂಡು ಕುಳಿತಿಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ. ಸೋಮ ಶೇಖರ್, ಜೆಡಿಎಸ್ ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪೇಂದ್ರರೆಡ್ಡಿ ಯಾರು? ಮೈತ್ರಿ ಸರ್ಕಾರದ ಬಗ್ಗೆ ಹೇಳಿಕೆ ನೀಡಲು ದೇವೇಗೌಡರು ಕುಪೇಂದ್ರರೆಡ್ಡಿಗೆ ಅಧಿಕೃತವಾದ ಅಧಿಕಾರ ನೀಡಿದ್ದಾರೆಯೇ? ಕುಪೇಂದ್ರ ರೆಡ್ಡಿ ಬೇಕಿದ್ದರೆ ಜೆಡಿಎಸ್ ಕುರಿತು ಅಧಿಕೃತವಾಗಿ ಹೇಳಿಕೆ ನೀಡಲು ಅಧಿಕಾರ ಹೊಂದಿದ್ದಾರೆ ಎಂದು ದೇವೇಗೌಡರಿಂದ ಜಿಪಿಎ ತೆಗೆದುಕೊಂಡು ಬರಲಿ,ನಂತರ ಮಾತನಾಡಲಿ.

ಅವರು ಸಂಸದರೇ ಇರಬಹುದು, ಆದರೆ ಬಾಯಿಗೆ ಬಂದಂತೆ ಮಾತನಾಡಬಾರದು.ಆನೆ ನಡೆದುಹೋಗುತ್ತಿರುತ್ತದೆ, ನಾಯಿಗಳು ಬೊಗಳುತ್ತಿರುತ್ತವೆ. ಆದರೆ ಆನೆಗೆ ಏನೂ ಆಗುವುದಿಲ್ಲ. ಸಿದ್ದರಾಮಯ್ಯ ಆನೆ ಇದ್ದಂತೆ ಹೊಗಳಿಕೆಗೆ ಹಿಗ್ಗುವುದೂ ಇಲ್ಲ, ತೆಗಳಿಕೆಗೆ ತಗ್ಗುವುದೂ ಇಲ್ಲ ಎಂದು ಹೇಳಿದ್ದಾರೆ.

ಮೈತ್ರಿ ಸರ್ಕಾರ ಇರಬೇಕೋ, ಬೇಡವೋ ಎಂದು ಹೇಳುವಷ್ಟು ದೊಡ್ಡವನು ನಾನಲ್ಲ. ಸಮ್ಮಿಶ್ರ ಸರ್ಕಾರ ರಾಹುಲ್‍ಗಾಂಧಿ, ದೇವೇಗೌಡರ ಮಟ್ಟದಲ್ಲಿ ಚರ್ಚೆಯಾಗಿ ರಚನೆಯಾಗಿದೆ. ಆ ಬಗ್ಗೆ ಮಾತನಾಡಲು ನನಗಾಗಲೀ, ಕುಪೇಂದ್ರ ರೆಡ್ಡಿಗಾಗಲೀ ಅಧಿಕಾರ ಇಲ್ಲ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...