ಆಪರೇಷನ್ ಕಮಲಕ್ಕೆ ರಿವರ್ಸ್ ಆಪರೇಷನ್ ಮಾಡ್ತೀವಿ ಎಂದ್ರು ಸತೀಶ್ ಜಾರಕಿಹೊಳಿ ! ಯಾಕೆ ಗೊತ್ತಾ?

Date:

ಬಿಜೆಪಿಯವರು ಆಪರೇಷನ್ ಕಮಲ ಮಾಡಿದರೆ ನಾವು ರಿವರ್ಸ್ ಆಪರೇಷನ್ ಮಾಡುತ್ತೇವೆ ಎಂದು ಅರಣ್ಯ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಅವರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಆನಂದ್ ಸಿಂಗ್ ಅವರು, ಜಿಂದಾಲ್‍ಗೆ ಭೂಮಿ ಪರಭಾರೆ ವಿಷಯಕ್ಕೆ ರಾಜೀನಾಮೆ ಕೊಟ್ಟಿರಬಹುದು. ರಾಜೀನಾಮೆ ಕೊಡುವುದರಿಂದ ಪರಿಹಾರ ಸಿಗುವುದಿಲ್ಲ. ಈ ಬಗ್ಗೆ ಸರ್ಕಾರ ಗಮನ ಹರಿಸುತ್ತದೆ ಎಂದು ಹೇಳಿದರು. ಅವರು ರಾಜೀನಾಮೆ ಕೊಟ್ಟರೂ ಯೋಚಿಸಿ ನಿರ್ಧಾರ ಕೈಗೊಳ್ಳಲು 15 ದಿನಗಳ ಕಾಲಾವಕಾಶವಿರುತ್ತದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಸುಭದ್ರವಾಗಿದೆ.ಯಾರಿಂದಲೂ ಕೆಡವಲು ಸಾಧ್ಯವಿಲ್ಲ. ಈಗಾಗಲೇ 12 ಮಂದಿ ಮುಂಬೈಗೆ ಹೋಗಿ ಬರಿಗೈನಲ್ಲಿ ಹಿಂತಿರುಗಿದ್ದಾರೆ. ನಮ್ಮ ಸರ್ಕಾರ 4 ವರ್ಷ ಭದ್ರವಾಗಿರುತ್ತದೆ. ಯಾರಿಂದಲೂ ಏನೂ ಮಾಡಲು ಆಗುವುದಿಲ್ಲ ಎಂದರು.

7 ಮಂದಿ ಅತೃಪ್ತರು ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲವೆಂದು ಸ್ಥಳದಲ್ಲೇ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರಿಗೆ ದೂರವಾಣಿಯಲ್ಲಿ ಮಾತನಾಡಿ ಖಚಿತ ಪಡಿಸಿಕೊಂಡರು.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...