ಆರೋಗ್ಯ ಇಲಾಖೆಯಲ್ಲಿ ಕಾಮಪುರಾಣ: ವೈದ್ಯನ ಮತ್ತೊಂದು ಮುಖವಾಡ ಬಯಲು

Date:

ಆರೋಗ್ಯ ಇಲಾಖೆ ಅಧಿಕಾರಿಯ ಕಾಮಪುರಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೈದ್ಯ ಡಾ. ರತ್ನಾಕರ್​ನ ಮತ್ತೊಂದು ಮುಖವಾಡ ಇದೀಗ ಬಯಲಾಗಿದೆ.

ಆಯುಷ್ಮಾನ್ ನೋಡೆಲ್ ಆಫೀಸರ್ ಹಾಗೂ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್ ವಿರುದ್ಧ ಮಹಿಳಾ ಸಿಬ್ಬಂದಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪ ಕೇಳಿಬಂದ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಸಹ ಮಾಡಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಜಿಲ್ಲಾ‌ ಕಾರ್ಯಕ್ರಮದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ರತ್ನಾಕರ್, ಕಾರ್ಯಕ್ರಮ ಆಯೋಜನೆ ಹೆಸರಿನಲ್ಲಿಯೂ ಹಣ ದೋಚುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಕ್ಯಾಂಟಿನ್​ ಬಿಲ್​ನಲ್ಲಿಯೂ ಸಾವಿರ ರೂ. ಅಕ್ರಮ ಬಿಲ್ ಮಾಡುತ್ತಿದ್ದ ಆರೋಪವಿದೆ.

ಎರಡ್ಮೂರು ದಿನಕ್ಕೊಮ್ಮೆ 150 ರಿಂದ 200 ಜನರಿಗೆ ಟೀ ತಿಂಡಿ ಎಂದು ಉಲ್ಲೇಖ ಮಾಡಿ 5 ರಿಂದ 10 ಸಾವಿರ ಮೊತ್ತದ ಒಂದೊಂದು ಕ್ಯಾಂಟಿನ್​ ಬಿಲ್ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಹೀಗಾಗಿ ಈ ಬಗ್ಗೆಯು ನಡೆಸುವಂತೆ ಒತ್ತಾಯಗಳು ಕೇಳಿಬರುತ್ತಿದೆ.

ಇನ್ನು ಮಹಿಳಾ ಸಿಬ್ಬಂದಿ ಮೇಲಿನ ದೌರ್ಜನ್ಯಕ್ಕೂ ಜಿಲ್ಲಾ ಆಸ್ಪತ್ರೆಗೂ ಸಂಬಂಧ ಇಲ್ಲ ಎಂದ ವೆನ್​ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರು ಸ್ಪಷ್ಟೀಕರಣ ನೀಡಿದ್ದಾರೆ. ಮಹಿಳಾ ಸಿಬ್ಬಂದಿಯು ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಕಚೇರಿಯಲ್ಲಿನ ಸಿಬ್ಬಂದಿಗಳೆಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...