ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಅನುಮಾನಾಸ್ಪದ ಸಾವು !? ಆರೋಪಿ ಬಂಧನ

Date:

ರಾಯಚೂರಿನ ನವೋದಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐದನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಧು ಪತ್ತಾರ್ ಕಳೆದ ಏಪ್ರಿಲ್13ರಂದು ನಾಪತ್ತೆಯಾಗಿದ್ದರು. ನಂತರ ಮಧುವಿನ ಶವ ಏಪ್ರಿಲ್ 16ರಂದು ಅವರ ಕಾಲೇಜಿನಿಂದ ಸುಮಾರು 4 ಕಿಲೋಮೀಟರ್‌ ದೂರದಲ್ಲಿ ನೇಣಿಗೆ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಮಧುವಿನ ಶವವು ನೆಲಕ್ಕೆ ತಾಗಿರುವಂತೆ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಸುಟ್ಟ ಗುರುತುಗಳಿದ್ದ ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ. ಹಾಗೇ ಆ ಸ್ಥಳದಲ್ಲಿ ಮಧು ಪತ್ತಾರ್ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಕೂಡಾ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಧು ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಧು ಪತ್ತಾರ್ ಅವರ ಅನುಮಾನಾಸ್ಪದ ಈ ಸಾವಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆಕೆಯ ಸಾವಿಗೆ ನ್ಯಾಯ ಒದಗಿಸಲು, ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ವಿಧಿಸಬೇಕಾಗಿ ಅಭಿಯಾನ ಶುರುವಾಗಿದೆ.

ಮಧು ಪತ್ತಾರ್ ಪೋಷಕರ ದೂರಿನನ್ವಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನೇತಾಜಿ ನಗರ ಪೊಲೀಸರು, ಐಪಿಸಿ ಸೆಕ್ಷನ್ 302 ಮತ್ತು 376 ರ ಅಡಿ ಅತ್ಯಾಚಾರ ಮತ್ತು ಕೊಲೆ ಎಂದು ಪ್ರಕರಣ ದಾಖಲಿಸಿ, ಸುದರ್ಶನ ಯಾದವ್ ಎಂಬ ಯುವಕನನ್ನು ಬಂಧಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...