ಇಂದಿನಿಂದ ಶ್ರೀ ಜಗನ್ನಾಥ ರಥಯಾತ್ರೆ ಪ್ರಾರಂಭ: ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

Date:

ಇಂದಿನಿಂದ ಶ್ರೀ ಜಗನ್ನಾಥ ರಥಯಾತ್ರೆ ಪ್ರಾರಂಭ: ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

 

ನವದೆಹಲಿ: ಇಂದಿನಿಂದ ಪುರಿಯಲ್ಲಿ ಪ್ರಾರಂಭವಾಗುವ ಜಗನ್ನಾಥ ರಥಯಾತ್ರೆ 9 ದಿನಗಳ ಕಾಲ ನಡೆಯಲಿದೆ. ಪುರಿ ಜಗನ್ನಾಥ ಯಾತ್ರೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ. ದೇವರು ಪ್ರತಿಯೊಬ್ಬರಿಗೂ ಖುಷಿ, ಸಮೃದ್ಧಿ, ಅದೃಷ್ಟ ಹಾಗೂ ಅದ್ಬುತ ಆರೋಗ್ಯ ನೀಡುವಂತೆ ಕೋರಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ”ಜಗನ್ನಾಥ ರಥಯಾತ್ರೆಯ ಪವಿತ್ರ ಸಂದರ್ಭದಲ್ಲಿ, ದೇಶದ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ.

ನಂಬಿಕೆ ಮತ್ತು ಭಕ್ತಿಯ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲೂ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಅತ್ಯುತ್ತಮ ಆರೋಗ್ಯವನ್ನು ತರಲಿ” ಎಂದಿದ್ದಾರೆ. ಜಗನ್ನಾಥ ರಥಯಾತ್ರೆಯ ಜೊತೆಗೆ, ಹಿಂದೂ ಕ್ಯಾಲೆಂಡರ್ ಪ್ರಕಾರ ಆಷಾಢ ಮಾಸದ ಎರಡನೇ ದಿನದಿಂದ ಪ್ರಾರಂಭವಾಗುವ ಕಚ್ ಹೊಸ ವರ್ಷಕ್ಕೂ ಪ್ರಧಾನಿ ಶುಭ ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...