ಇಂದು‌ 58,395 ಮಂದಿ ಡಿಸ್ಚಾರ್ಜ್!

Date:

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಧಾನವಾಗಿ ಇಳಿಕೆಯಾಗುತ್ತಿವೆ. ಕರ್ನಾಟಕದಲ್ಲಿ ಇಂದು 30,309 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 525 ಜನರನ್ನು ಮಹಾಮಾರಿ ಬಲಿ ಪಡೆದಿದೆ. ಬೆಂಗಳೂರಿನಲ್ಲಿ 8,676 ಮಂದಿಗೆ ಕೊರೊನಾ ದೃಢಪಟ್ಟಿದ್ದು, 298 ಜನ ಸಾವನ್ನಪ್ಪಿದ್ದಾರೆ.

ಇಂದು 30,309 ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 5,75,028ಕ್ಕೆ ಏರಿಕೆಯಾಗಿದ್ದು, ಇಂದು 525 ಜನ ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ ಒಟ್ಟು 22,838 ಜನ ಸಾವನ್ನಪ್ಪಿದ್ದಾರೆ. ಈ ವರೆಗೆ ಒಟ್ಟು 22,72,374 ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ.

ಇಂದು 58,395 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 16,74,487 ಜನ ಈ ವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿನ ಖಚಿತ ಪ್ರಮಾಣ ಶೇ.32.50ರಷ್ಟಿದ್ದು, ಮೃತಪಟ್ಟವರ ಪ್ರಮಾಣ ಶೇ.1.73ರಷ್ಟಿದೆ. ಇಂದು 12,535 ಆಂಟಿಜನ್ ಟೆಸ್ಟ್, 80,712 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 93,247 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 65,181 ಮಂದಿಗೆ ಲಸಿಕೆ ನೀಡಲಾಗಿದೆ.

ಬೆಳಗಾವಿ 2,118, ಮೈಸೂರು 1,916, ಬಳ್ಳಾರಿ 1,799, ತುಮಕೂರು 1,562, ಬೆಂಗಳೂರು ಗ್ರಾಮಾಂತರ 1,339, ಶಿವಮೊಗ್ಗ 1,168 ಹಾಗೂ ಕೋಲಾರದಲ್ಲಿ 1,021 ಪ್ರಕರಣಗಳು ವರದಿಯಾಗಿವೆ.

 

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...