ಇಂದು ಕೇಂದ್ರ ಬಜೆಟ್ ಮಂಡನೆ: ಕರ್ನಾಟಕದ ನಿರೀಕ್ಷೆಗಳೇನು..?

Date:

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇಂದು ಮಂಡನೆಯಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬೆಳಗ್ಗೆ 11 ಗಂಟೆಗೆ ದಾಖಲೆ 7ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಇಂದಿನ ಬಜೆಟ್ ಬಗ್ಗೆ ಜನಸಾಮಾನ್ಯರಿಂದ ಹಿಡಿದು ಉದ್ಯಮಿಗಗಳ ತನಕ, ಅನ್ನದಾತರಿಂದ ವ್ಯಾಪಾರಿಗಳ ತನಕ, ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಂದ ಹಿಡಿದು ರಾಜ್ಯದ ಮೂಲೆ ಮೂಲೆಯಲ್ಲಿ ಸಂಚರಿಸುವ ರೈಲ್ವೇ ಪ್ರಯಾಣಿಕರ ತನಕ ಅಪಾರ ನಿರೀಕ್ಷೆ ಇದೆ.

ಮೆಟ್ರೋ ಯೋಜನೆಗೆ ಅನುದಾನ

ಬೆಂಗಳೂರು ಮೆಟ್ರೋದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ. ಪ್ರತಿ ಮೆಟ್ರೋ ಕಾಮಗಾರಿ ನಿಗದಿತ ಅವಧಿಗಿಂತ ತಡವಾಗಿ ಮುಕ್ತಾಯಗೊಳ್ಳುತ್ತಿದೆ. ಸದ್ಯ ಸಾಗುತ್ತಿರುವ ಏರ್‌ಪೋರ್ಟ್‌ ಲೈನ್‌, ಕಾಳೇನ ಅಗ್ರಹಾರ-ನಾಗವಾರ ಕಾಮಗಾರಿಗೆ ಅನುದಾನದ ಜತೆಗೆ ಮೆಟ್ರೋ ಹಂತ-3ರ ಯೋಜನೆಗೆ 15 ಸಾವಿರ ಕೋಟಿ ರೂಪಾಯಿ ಅನುದಾನದ ಬಗ್ಗೆ ಪ್ರಸ್ತಾಪಿಸುವ ನಿರೀಕ್ಷೆ ಇದೆ. ಇದ್ರ ಜೊತೆ ರಾಜ್ಯದ ರಾಜ್ಯದ ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ಡಂಡೆ ಯೋಜನೆಗೆ ಅನುದಾನ ಸಿಗೋ ನಿರೀಕ್ಷೆ ಇದೆ. ಯಾಕಂದ್ರೆ ವರ್ಷ ಉರುಳಿದ್ರೂ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆಯಾಗಿಲ್ಲ. ಕನಿಷ್ಠ ಈ ಬಾರಿಯಾದ್ರೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡ್ಬೇಕು ಅನ್ನೋ ಆಗ್ರಹ ಇದೆ.

ಕೊಲ್ಲೂರು – ಧರ್ಮಸ್ಥಳ – ಕುಕ್ಕೆ ರೈಲು ಯೋಜನೆ ಸಮೀಕ್ಷೆಗೆ ಅನುಮೋದನೆ

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ರೈಲು ಯೋಜನೆಗಳಿಗೆ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಯಾಕಂದರೆ ಕರ್ನಾಟಕದ ವಿ.ಸೋಮಣ್ಣ ರೈಲ್ವೇ ಖಾತೆ ರಾಜ್ಯ ಸಚಿವರಾಗಿದ್ದಾರೆ. ಸೋಮಣ್ಣ, ಕಳೆದ ವಾರ ದಕ್ಷಿಣ ಕನ್ನಡ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಜಿಲ್ಲೆಗೆ ಸಂಬಂಧಿಸಿದ ರೈಲು ಯೋಜನೆಗಳ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಬಳಿಕ ಬೆಳ್ತಂಗಡಿಯಲ್ಲಿ ಮಾತನಾಡಿದ್ದ ವಿ.ಸೋಮಣ್ಣ, ಕೊಲ್ಲೂರು- ಧರ್ಮಸ್ಥಳ- ಕುಕ್ಕೆಗೆ ಸಂಪರ್ಕ ಬೆಸೆಯುವ ರೈಲು ಯೋಜನೆ ಸಮೀಕ್ಷೆ ಕಾರ್ಯ ಆರಂಭಿಸಲಾಗುತ್ತದೆ ಎಂದಿದ್ದರು. ಹೀಗಾಗಿ ಈ ಯೋಜನೆಗೆ ಈ ಬಾರಿ ಅನುಮೋದನೆ ಸಿಗುವ ನಿರೀಕ್ಷೆ ಇದೆ.

ಕರ್ನಾಟಕದ ಇತರ ನಿರೀಕ್ಷೆಗಳೇನು?

ಮೇಕೆದಾಟು, ಕಳಸಾ, ಎತ್ತಿನಹೊಳೆ ಯೋಜನೆಗಳ ಬಗ್ಗೆ ಪ್ರಸ್ತಾಪ ಆಗುತ್ತಾ, ಕಿಸಾನ್ ನಿಧಿ ಹೆಚ್ಚಳವಾಗುತ್ತಾ? ತೆಂಗು ಅಭಿವೃದ್ಧಿ ಮಂಡಳಿಗೆ ವಿಶೇಷ ಪ್ಯಾಕೇಜ್ ಸಿಗಬಹುದೇ ಎಂಬ ಪ್ರಶ್ನೆಗಳು ಕರ್ನಾಟಕದ ಜನತೆಯ ಮನಸಲ್ಲಿವೆ. ಜತೆಗೆ ಸಿರಿಧಾನ್ಯ ಬಳಕೆಗೆ ಪ್ರೋತ್ಸಾಹ ಸಿಕ್ಕರೆ ಕರ್ನಾಟಕದ ರೈತರಿಗೆ ಬಂಪರ್ ಸಿಗಲಿದೆ. ಇದರ ಜೊತೆಗೆ ಹೊಟೇಲ್‌ ಉದ್ಯಮಿಗಳಿಗೆ ತೆರಿಗೆ ಹೊರೆ ಇಳಿಸುವ ನಿರೀಕ್ಷೆ ಇದೆ. ಇನ್ನು ಬಿಸಿಲ ನಾಡು ರಾಯಚೂರಿಗೆ ಏಮ್ಸ್‌ ಆಸ್ಪತ್ರೆ ಒಲಿಯುವ ನಿರೀಕ್ಷೆ ಇದೆ. ಅಲ್ಲದೆ ರಾಜ್ಯದ 39 ರಸ್ತೆಗಳಿಗೆ ರಾಷ್ಟ್ರೀಯ ಹೆದ್ದಾರಿ ಬಡ್ತಿ ಸಿಗಬಹುದು ಎಂಬ ನಿರೀಕ್ಷೆಯೂ ಇದೆ.

Share post:

Subscribe

spot_imgspot_img

Popular

More like this
Related

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...