ಇಂದು ಕೋರ್ಟ್‌ʼಗೆ ಹಾಜರಾಗಲಿರುವ ಡಿ ಗ್ಯಾಂಗ್: ದರ್ಶನ್ ಮತ್ತು ಪವಿತ್ರಾಗೌಡ ಮುಖಾಮುಖಿ!?

Date:

ಇಂದು ಕೋರ್ಟ್‌ʼಗೆ ಹಾಜರಾಗಲಿರುವ ಡಿ ಗ್ಯಾಂಗ್: ದರ್ಶನ್ ಮತ್ತು ಪವಿತ್ರಾಗೌಡ ಮುಖಾಮುಖಿ!?

ಬೆಂಗಳೂರು: ರೇಣುಕಾಸ್ವಾಮಿ ಕೇಸ್ಗೆ ಸಂಬಂಧಿಸಿ ಇಂದು ದರ್ಶನ್ ಹಾಗೂ ಪವಿತ್ರಾ ಗೌಡ ಅವರು ಮುಖಾಮುಖಿಯಾಗುತ್ತಾರಾ? ಎನ್ನುವ ಅನುಮಾನವಿದೆ.ಯಾಕಂದ್ರೆ ಡಿ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ನಲ್ಲಿ 17 ಆರೋಪಿಗಳ ವಿಚಾರಣೆ ನಡೆಯಲಿದೆ. ಜಡ್ಜ್ ಎದುರು ಆರೋಪಿಗಳು ತಮ್ಮ ಹೇಳಿಕೆ ನೀಡಲಿದ್ದಾರೆ. ಜಾಮೀನು ನೀಡುವಾಗ ಆರೋಪಿಗಳಿಗೆ ಹೈಕೋರ್ಟ್ ಷರತ್ತು ವಿಧಿಸಿತ್ತು.
ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕು ಎಂದು ಆರೋಪಿಗಳಿಗೆ ಸೂಚಿಸಿತ್ತು. ಹೀಗಾಗಿ ಬೆಳಿಗ್ಗೆ 11 ಗಂಟೆಗೆ ನಡೆಯುವ ವಿಚಾರಣೆಯಲ್ಲಿ ಆರೋಪಿಗಳು ಹಾಜರಿ ಹಾಕಲಿದ್ದಾರೆ. ಕೋರ್ಟ್ ಗೆ ಹಾಜರು ಆಗುವಾಗ ಇಂದೇ ದರ್ಶನ್ ಮತ್ತು ಪವಿತ್ರಾಗೌಡ ಮುಖಾಮುಖಿಯಾಗುವ ಸಾಧ್ಯತೆ ಕೂಡಾ ಇದೆ ಎನ್ನಲಾಗಿದೆ.
ಕೆಲವೊಮ್ಮೆ ಆರೋಪಿಗಳು ಕೋರ್ಟ್ಗೆ ಹಾಜರಾಗಲು ಸಾಧ್ಯ ಆಗದೆ ಇರಬಹುದು. ಈ ವೇಳೆ ಎಲ್ಲಾ ಆರೋಪಿಗಳು ಸೂಕ್ತ ಕಾರಣ ನೀಡಿ ವಿನಾಯಿತಿ ಪಡೆಯಬೇಕು. ಇಲ್ಲದಿದ್ದರೆ ಕಾನೂನಾತ್ಮಕವಾಗಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...