ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

Date:

ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ

ಮೈಸೂರು: ನವರಾತ್ರಿಯ 9ನೇ ದಿನ ಇಂದು ಆಯುಧ ಪೂಜೆ. ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಕಾರ್ಯಕ್ರಮ ಆರಂಭವಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಸುಕಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಯುಧ ಪೂಜಾ ನೆರವೇರಿಸಲಿದ್ದಾರೆ. ಈ ಹಿನ್ನೆಲೆ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ.
ಬೆಳಿಗ್ಗೆ 6ಗಂಟೆಗೆ ಅರಮನೆಯ ಚಾಮುಂಡಿ ತೊಟ್ಟಿಯಲ್ಲಿ ಚಂಡಿಕಾಹೋಮ ನೆರವೇರಲಿದ್ದು, ಪಟ್ಟದ ಆನೆ, ಕುದುರೆ, ಹಸು ಆನೆ ಬಾಗಿಲಿಗೆ ಆಗಮನವಾಗಲಿವೆ. ಖಾಸಗಿ ಆಯುಧಗಳನ್ನ ಆನೆ ಬಾಗಿಲು ಮೂಲಕ ಶ್ರೀ ಕೋಡಿ ಸೋಮೇಶ್ವರ ದೇವಾಲಯಕ್ಕೆ ರವಾನೆ ಮಾಡಲಾಗುತ್ತದೆ.
ಬಳಿಕ ಕೋಡಿ ಸೋಮೇಶ್ವರ ದೇವಾಲಯದಿಂದ ಖಾಸಾ ಆಯುಧಗಳನ್ನ ಆನೆ ಬಾಗಿಲ ಮುಖಾಂತರ ಅರಮನೆಯ ಕಲ್ಯಾಣ ಮಂಟಪಕ್ಕೆ ರವಾನೆ ಮಾಡಲಾಗುತ್ತದೆ. ನಂತರ ಚಂಡಿ ಹೋಮ ಪೂರ್ಣಾಹುತಿ ನೆರವೇರಲಿದೆ. ಆ ನಂತರ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆನೆ ಬಾಗಿಲಿಗೆ ಬಂದು, ಅರಮನೆಯ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಲಿದೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...