ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಮಾತನಾಡಲಿದ್ದಾರೆ. ಪಾಕಿಸ್ತಾನದ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಳಿಕ ಮೋದಿ ಇಲ್ಲಿಯವರೆಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿರಲಿಲ್ಲ. ಹೀಗಾಗಿ ಇಂದು ಏನು ಹೇಳುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.
ಇಂದು ಸಂಜೆ ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ಜೊತೆ ಸಭೆ ನಡೆಯಲಿದೆ. ಕದನ ವಿರಾಮ ಘೋಷಣೆಯಾದ ನಂತರ ಎರಡು ದೇಶಗಳ ಡಿಜಿಎಂಒಗಳು ಇಂದು ಮೊದಲ ಬಾರಿಗೆ ಮಾತನಾಡಲಿದ್ದಾರೆ. ಪೂರ್ವ ನಿಗದಿ ಪ್ರಕಾರ ಇಂದು ಮಧ್ಯಾಹ್ನ ಡಿಜಿಎಂಒ ಸಭೆ ನಡೆಯಬೇಕಿತ್ತು. ಆದರೆ ಈ ಸಭೆ ಇಂದು ಸಂಜೆಗೆ ಮುಂದೂಡಿಕೆಯಾಗಿದೆ.