ಇಂದು ರಾಧಿಕಾ ಪಂಡಿತ್​​ ಬರ್ತ್​ಡೇ ; ಅಭಿಮಾನಿಗಳನ್ನು ಬಿಟ್ಟು ಹುಟ್ಟುಹಬ್ಬ

Date:

ಆಚರಿಸಿಕೊಳ್ತಿರೋದೇಕೆ ಸ್ಯಾಂಡಲ್​​ವುಡ್ ಸಿಂಡ್ರೆಲ್ಲಾ?
ಸ್ಯಾಂಡಲ್​ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 2008ರಲ್ಲಿ ತೆರೆಕಂಡ ಮೊಗ್ಗಿನ ಮನಸ್ಸು ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ ಪ್ರವೇಶಿಸಿದ ಅವರು, ಇಂದು ಕನ್ನಡ ಚಿತ್ರರಂಗದ ಜನಪ್ರಿಯ ಸ್ಟಾರ್ ನಟಿ. ಮೊದಲ ಸಿನಿಮಾವನ್ನೇ ಹಿಟ್ ನೀಡಿದ ಅವರು ಹುಡುಗರು, ದೊಡ್ಮನೆ ಹುಡುಗ, ಡ್ರಾಮಾ, ಸಂತು ಸ್ಟ್ರೈಟ್ ಫಾರ್ವಡ್​ ಹೀಗೆ ಹತ್ತಾರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.

ಇತ್ತೀಚೆಗೆ ಬಂದ ಆಧಿಲಕ್ಷ್ಮೀ ಪುರಾಣ ಕೂಡ ಹಿಟ್. ಚೊಚ್ಚಲ ಮೊಗ್ಗಿನ ಮನಸ್ಸು ಸಿನಿಮಾಕ್ಕೇನೇ ಫಿಲ್ಮ್​ ಫೇರ್ ಅವಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.


ಇಂದು 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆದರೆ, ಪ್ರತೀ ವರ್ಷ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಅವರು, ಈ ಬಾರಿ ಅಭಿಮಾನಿಗಳೊಡನೆ ಸೆಲೆಬ್ರೇಷನ್ ಮಾಡಿಕೊಳ್ಳುತ್ತಿಲ್ಲ. ಇದಕ್ಕೆ ಕಾರಣ ಮಹಾ ಮಾರಿ ಕೊರೋನಾ. ರಾಜ್ಯದಲ್ಲೂ ಈ ಹೆಮ್ಮಾರಿ ಆತಂಕ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಜನ ಗುಂಪು ಗುಂಪಾಗಿ ಸೇರದಿರಲಿ ಎಂಬ ಕಾರಣಕ್ಕೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ.


ಈ ಬಗ್ಗೆ ಈ ಹಿಂದೆಯೇ ರಾಧಿಕಾ ಪತಿ, ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದರು. ಅಭಿಮಾನಿಗಳ ಜೊತೆ ಅದ್ದೂರಿಯಾಗಿ ಈ ಸಲ ರಾಧಿಕಾ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಮನೆಯಲ್ಲಿ ಮಕ್ಕಳು ಬೇರೆ ಇದ್ದಾರೆ. ಆರೋಗ್ಯದ ಮೇಲೆ ಪರಿಣಾಮ ಬೀರ ಬಾರದು. ಅಲ್ಲದೆ ಜನ ಕೂಡ ಜಾಗೃತರಾಗಿರಿ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಯ ಕಂಡುಬಂದರೂ ಕೂಡ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಅಂತ ಕರೆಕೊಟ್ಟಿದ್ದರು.


ಹೀಗಾಗಿ ಕೊರೋನಾ ದೆಸೆಯಿಂದ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಯಶ್, ಮುದ್ದಾದ ಮಕ್ಕಳು ಮತ್ತು ಇಡೀ ಕುಟುಂಬದೊಂದಿಗೆ ರಾಧಿಕಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಎನಿವೇ ರಾಧಿಕಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು.

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...