ಇಂದು ಸುಪ್ರೀಂ ಕೋರ್ಟ್ʼನಲ್ಲಿ ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

tnit editors
1 Min Read

ಇಂದು ಸುಪ್ರೀಂ ಕೋರ್ಟ್ʼನಲ್ಲಿ ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ನಲ್ಲಿ ದರ್ಶನ್ ಬೇಲ್ ಅರ್ಜಿ ವಿಚಾರಣೆ ನಡೆಯುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತೂಗುದೀಪ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್‌ 2024 ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಅಂತೆಯೇ ಇಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಪರ್ದೀವಾಲ, ನ್ಯಾಯಮೂರ್ತಿ ಮಹದೇವನ್ ಪೀಠ ಅರ್ಜಿ ವಿಚಾರಣೆಯನ್ನು ಕೈಕೈಗೆತ್ತಿಕೊಳ್ಳಲಿದೆ.
ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್‌, ಎ7 ಅನುಕುಮಾರ್‌, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್‌ ಹಾಗೋ ಎ 14 ಪ್ರದೂಶ್ಗೆ ಮತ್ತೆ ಸಂಕಷ್ಟ ಎದುರಾಗಿದೆ.

Share This Article