ಮಂಡ್ಯ: ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, 2 ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಂಡ್ಯದ ಜನಾಂದೋಲನದಲ್ಲಿ ಮಾತನಾಡಿದ ಅವರು, ತಾಂತ್ರಿಕ ಕಾರಣದಿಂದ ಹಣ ಬಂದಿರಲಿಲ್ಲ. ಇಂದಿನಿಂದ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆಯಾಗಲಿದೆ. ನುಡಿದಂತೆ ನಡೆಯುವವರು ಕಾಂಗ್ರೆಸ್ನವರು. ನಮಗೆ ಸಿಕ್ಕ ಅಧಿಕಾರದಲ್ಲಿ ಜನರಿಗೆ ಒಳ್ಳೆಯದು ಮಾಡುತ್ತೇವೆ. ಬರಗಾಲದಲ್ಲಿ ಪರಿಹಾರ ಕೊಡಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ಆದರೆ ಬಿಜೆಪಿ ಭ್ರಷ್ಟ ಸರ್ಕಾರ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದು ಕಿಡಿಕಾರಿದರು.