ಇಡೀ ದೇಶದ ಪೋಷಕರನ್ನು ಅವಮಾನಿಸಿದ್ದೀರಿ: ಯೂಟ್ಯೂಬರ್ ಹೇಳಿಕೆಗೆ ಸುಪ್ರೀಂ ಛೀಮಾರಿ!

Date:

ಇಡೀ ದೇಶದ ಪೋಷಕರನ್ನು ಅವಮಾನಿಸಿದ್ದೀರಿ: ಯೂಟ್ಯೂಬರ್ ಹೇಳಿಕೆಗೆ ಸುಪ್ರೀಂ ಛೀಮಾರಿ!

ನವದೆಹಲಿ: ಯೂಟ್ಯೂಬರ್ ರಣವೀರ್ ಅಲ್ಲಾಬಾಡಿಯಾ ಅವರು ನಟ ಸಮಯ್ ರೈನಾ ಅವರ ಕಾರ್ಯಕ್ರಮದಲ್ಲಿ ಅಶ್ಲೀಲ ಕಮೆಂಟ್ ಗಳನ್ನು ಮಾಡಿ ವಿವಾದಕ್ಕೆ ಸಿಲುಕಿದ್ರು. ರಣವೀರ್ ವಿರುದ್ಧ ಅನೇಕರು ಆಕ್ರೋಶ ಹೊರ ಹಾಕಿದ್ರು. ಇದೀಗ ಯೂಟ್ಯೂಬರ್ ರಣವೀರ್ ಅಲಹಬಾದಿಯ ಬಂಧನಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ತನ್ನ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಿ ಮಧ್ಯಂತರ ರಕ್ಷಣೆ ಕೋರಿ ರಣವೀರ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾ ಸೂರ್ಯ ಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಪೀಠ ಪ್ರಕರಣಗಳಲ್ಲಿ ತನಿಖೆಗೆ ಸಹಕರಿಸುವಂತೆ ಸೂಚಿಸಿ ಯಾವುದೇ ಹೊಸ ಪ್ರಕರಣ ದಾಖಲಿಸಿದಂತೆ ನಿರ್ದೇಶಿಸಿ ಬಂಧನಕ್ಕೆ ಮಧ್ಯಂತರ ತಡೆ ನೀಡಿತು.
ಇದೇ ವೇಳೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ ಮತ್ತು ಅಸ್ಸಾಂ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಯಾವುದೇ ಬೆದರಿಕೆಗಳು ಬಂದ ಸಂದರ್ಭದಲ್ಲಿ ರಣವೀರ್ ಮಹಾರಾಷ್ಟ್ರ ಮತ್ತು ಅಸ್ಸಾಂ ಪೊಲೀಸರನ್ನು ಸಂಪರ್ಕಿಸಿ ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ಕೋರಬಹುದು ಎಂದು ಅದು ಹೇಳಿದೆ.
ವಿಚಾರಣೆ ವೇಳೆ ಯೂಟ್ಯೂಬರ್ ರಣವೀರ್ ಅವರ ಹೇಳಿಕೆಗೆ ನ್ಯಾ. ಸೂರ್ಯಕಾಂತ್ ಆಕ್ಷೇಪ ವ್ಯಕ್ತಪಡಿಸಿದರು. ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? ನೀವು ಯಾವಾಗ ಬೇಕಾದರೂ ನಿಮ್ಮ ಅಸಭ್ಯತೆಯನ್ನು ತೋರಿಸಬಹುದೇ? ಇಡೀ ದೇಶದ ಪೋಷಕರನ್ನು ಅವಮಾನಿಸಿದ್ದೀರಿ ಇಂತಹ ನಡವಳಿಕೆಯನ್ನು ಖಂಡಿಸಲೇಬೇಕು ಎಂದು ಖಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ನೀವು ಜನಪ್ರಿಯರಾಗಿದ್ದೀರಿ ಎಂಬ ಕಾರಣಕ್ಕೆ ಸಮಾಜವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಈ ಭಾಷೆಯನ್ನು ಇಷ್ಟಪಡುವವರು ಭೂಮಿಯ ಮೇಲೆ ಯಾರಾದರೂ ಇದ್ದಾರೆಯೇ? ಇಷ್ಟಪಟ್ಟರೇ ಅವರ ಮನಸ್ಸಿನಲ್ಲಿ ಏನೋ ಕೊಳಕಿದೆ ಎಂದರ್ಥ. ನಾವು ನಿಮ್ಮನ್ನು ಯಾಕೆ ರಕ್ಷಿಸಬೇಕು? ನೀವು ಮತ್ತು ನಿಮ್ಮ ಬೆಂಬಲಿಗರು ಈ ಅಧಃಪತನದ ಮಟ್ಟಕ್ಕೆ ಇಳಿದಿದ್ದೀರಿ. ಕಾನೂನು ಮತ್ತು ವ್ಯವಸ್ಥೆಯ ನಿಯಮವನ್ನು ಪಾಲಿಸಬೇಕು ಎಂದು ನ್ಯಾ. ಸೂರ್ಯಕಾಂತ್ ಸೂಚಿಸಿದರು.
ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಪುತ್ರ ಅಭಿನವ್ ಚಂದ್ರಚೂಡ್ ಅವರು ರಣವೀರ್ ಪರ ವಾದ ಮಂಡಿಸಿ, ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಿದರು. ಯೂಟ್ಯೂಬರ್‌ನ ನಾಲಿಗೆ ಕತ್ತರಿಸುವವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾದ ಪ್ರಕರಣವನ್ನು ಅವರು ಉಲ್ಲೇಖಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಅಭಿನವ್ ಚಂದ್ರಚೂಡ್ ಅವರನ್ನು ತರಾಟೆಗೆ ತೆಗೆದುಕೊಂಡು ಪಾಡ್‌ಕ್ಯಾಸ್ಟರ್ ಬಳಸಿದ ಭಾಷೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿತು. ನೀವು ಜನಪ್ರೀಯತೆಗೆ ಹೇಳಿಕೆ ನೀಡಿದ್ದೀರಿ ಅದೇ ರೀತಿ ಅವರು ಬೆದರಿಕೆ ಮೂಲಕ ಜನಪ್ರಿಯತೆ ಪಡೆಯಲು ಪ್ರಯತ್ನಿಸುತ್ತಿರಬಹುದು ಎಂದು ಹೇಳಿತು.

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...