ಇದು ಸೌತೆಕಾಯಿ ಮ್ಯಾಟ್ರು ! ಹಿಂಗೆಲ್ಲಾ ಆಗುತ್ತಾ ?

Date:

ಸೌತೆಕಾಯಿಯನ್ನುಆಹಾರದಲ್ಲಿ ಸೇರಿಸುವುದು ಎಷ್ಟು ಉಪಯುಕ್ತವಾಗಿದೆ ಎಂಬ ಬಗ್ಗೆ ನಮಗೆ ಎಲ್ಲಾ ಮಾಹಿತಿ ಇದೆ. ಸೌತೆಕಾಯಿಯಲ್ಲಿ ನೀರಿನಾಂಶ ಅತಿ ಹೆಚ್ಚು. ಸೌತೆಕಾಯಿ ದೇಹವನ್ನು ಹೈಡ್ರೇಟ್ ಆಗಿ ಇಡಲು ಬಹಳ ಮುಖ್ಯ. ಬೇಸಿಗೆಯಲ್ಲಿ ಸೌತೆಕಾಯಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಲಾಗುತ್ತದೆ. ಸೌತೆಕಾಯಿ ಆರೋಗ್ಯಕ್ಕೆ  ತುಂಬಾ ಉಪಯುಕ್ತವಾಗಿದೆ.ಸೌತೆಕಾಯಿ ಸೇವನೆಯಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ..

ಜೀರ್ಣಕ್ರಿಯೆಗೆ ಒಳ್ಳೆಯದು:

ಸೌತೆಕಾಯಿಯಲ್ಲಿರುವ ಕರಗುವ ಫೈಬರ್ ನಿಮ್ಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಸೌತೆಕಾಯಿಯಲ್ಲಿ ಹೆಚ್ಚಿನ ನೀರಿನ ಅಂಶವು ನಿಮ್ಮ ಮಲವನ್ನು ಮೃದುಗೊಳಿಸುತ್ತದೆ, ಮಲಬದ್ಧತೆಯನ್ನು ತಡೆಯುತ್ತದೆ.

ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ:

ಸೌತೆಕಾಯಿಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮಧುಮೇಹ ಮೆಲ್ಲಿಟಸ್ ನಿರ್ವಹಣೆ ಮತ್ತು ತಡೆಗಟ್ಟುವಲ್ಲಿ ಇದು ಸಹಾಯಕವಾಗಿದೆ.

ತೂಕ ಇಳಿಸಲು ಸಹಕಾರಿ:

ಸೌತೆಕಾಯಿಗಳು ಶೇ. 96ರಷ್ಟು ನೀರನ್ನು ಹೊಂದಿರುತ್ತವೆ ಹಾಗೂ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತವೆ. 100 ಗ್ರಾಂ ಸೌತೆಕಾಯಿಯಲ್ಲಿ ಕೇವಲ 15.5 ಕ್ಯಾಲೋರಿಗಳಿರುತ್ತದೆ. ಸೌತೆಕಾಯಿಯಲ್ಲಿನ ಹೆಚ್ಚಿನ ನೀರು ಮತ್ತು ಕಡಿಮೆ ಕ್ಯಾಲೋರಿ ಅಂಶವು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉತ್ತಮ ಚರ್ಮಕ್ಕೆ ಸಹಕಾರಿ:

ಸೌತೆಕಾಯಿಗಳು ಉತ್ತಮ ಸೌಂದರ್ಯ ವರ್ಧಕಗಳಾಗಿವೆ. ಸೌತೆಕಾಯಿಯ ರಸವನ್ನು ತ್ವಚೆಯ ಮೇಲೆ ಹಚ್ಚುವುದರಿಂದ ಚರ್ಮವನ್ನು ಮೃದುಗೊಳಿಸಿ, ಹೊಳಪು ನೀಡುತ್ತದೆ. ಟ್ಯಾನ್ ಆದ ಚರ್ಮಕ್ಕೂ ಸೌತೆಕಾಯಿ ಸಹಕಾರಿ.

ಕಣ್ಣಿನ ಆರೋಗ್ಯಕ್ಕೆ ಉಪಯುಕ್ತ:

ಸೌತೆಕಾಯಿಯ ತುಂಡುಗಳನ್ನು ಸುಮಾರು 10 ನಿಮಿಷಗಳ ಕಾಲ ಕಣ್ಣುಗಳ ಮೇಲೆ ಇಡುವುದರಿಂದ ನಿಮ್ಮ ಕಣ್ಣುಗಳು ವಿಶ್ರಾಂತಿ ಪಡೆಯುತ್ತವೆ ಮತ್ತು ಕಣ್ಣಿನ ಸುತ್ತಲಿನ ಊತ ಕಡಿಮೆಯಾಗುತ್ತದೆ. ಡಾರ್ಕ್ ಸರ್ಕಲ್ ಕೂಡ ಕಡಿಮೆಯಾಗುತ್ತದೆ.

ದೇಹವನ್ನು ಹೈಡ್ರೀಕರಣಗೊಳಿಸುತ್ತದೆ:

ಉತ್ಕರ್ಷಣ ನಿರೋಧಕವಾದ ಸೌತೆಕಾಯಿ ನಿಮ್ಮ ಆರೋಗ್ಯವನ್ನು ಹೆಚ್ಚಿಸುತ್ತದೆ. ಸೌತೆಕಾಯಿ ಶೇ. 96ರಷ್ಟು ನೀರಿನಂಶವನ್ನು ಒಳಗೊಂಡಿರುತ್ತದೆ. ಸೌತೆಕಾಯಿಗಳನ್ನು ಸೇವಿಸುವುದರಿಂದ ದೇಹಕ್ಕೆ ನೀರಿನ ಅಂಶ ಹೆಚ್ಚು ಸಿಗುತ್ತದೆ. ಇದು ನಿಮ್ಮನ್ನು ಹೈಡ್ರೀಕರಿಸುತ್ತದೆ. ಹಾಗೇ, ನೀರಿಗೆ ಸೌತೆಕಾಯಿ ಹೋಳನ್ನು ಹಾಕಿಕೊಂಡು ಕುಡಿಯುವುದರಿಂದ ದೇಹದಲ್ಲಿನ ವಿಷಕಾರಿ ಅಂಶ ಹೊರಹೋಗುತ್ತದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಸೌತೆಕಾಯಿಗಳು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಡಯೆಟರಿ ಫೈಬರ್‌ನ ಉತ್ತಮ ಮೂಲವಾಗಿದೆ. ಈ ಪೋಷಕಾಂಶಗಳು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಹೃದಯದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ವಯಸ್ಸಾದವರು ಸೌತೆಕಾಯಿಯ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ ಎಂದು ಸಂಶೋಧನೆ ಸಾಬೀತುಪಡಿಸಿದೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...