ಇದ್ದಕ್ಕಿದ್ದಂತೆ ಏರ್ಪೋರ್ಟ್ ರನ್‌ವೇಗೆ ನುಗ್ಗಿದ ವ್ಯಕ್ತಿ!

Date:

ವಿಮಾನ ನಿಲ್ದಾಣದ ರನ್‌ವೇಗೆ ಏಕಾ ಏಕಿ ನುಗ್ಗಿದ ವ್ಯಕ್ತಿ ಕೆಲ ಕಾಲ ಆತಂಕ ಸೃಷ್ಠಿಸಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ವ್ಯಕ್ತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಜುಲೈ 5 ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ವಿಚಾರಣೆ ವೇಳೆ ವ್ಯಕ್ತಿ ಲಾರಿ ಕ್ಲೀನರ್ ಎಂದು ತಿಳಿದು ಬಂದಿದೆ. ಪಶ್ಚಿಮ ಬಂಗಾಳ ಮೂಲದ ಮುರ್ಶೀದಾಬಾದ್ ನಿವಾಸಿ ರಾಕೇಶ್ ದಾರಿ ತಪ್ಪಿ ರನ್‌ವೇ ಒಳಗಡೆ ಪ್ರವೇಶಿಸಿದ್ದಾನೆ.


ರನ್ ವೇ ಸಮೀಪದ ಪ್ರದೇಶವೊಂದರಲ್ಲಿ ಕಾಮಗಾರಿಯ ಲಾರಿ ಕ್ಲೀನರ್ ಆಗಿರುವ ರಾಕೇಶ್‌ನನ್ನು ಲಾರಿಯಲ್ಲಿ ಚಾಲಕ ಬಿಟ್ಟು ಹೋಗಿದ್ದ. ರಾತ್ರಿ ಸಮಯದಲ್ಲಿ ಒಬ್ಬನೇ ಇರೋಕೆ ಭಯಗೊಂಡ ರಾಕೇಶ್ ಡ್ರೈವರ್‌ನನ್ನು ಹುಡುಕುತ್ತಾ ರನ್ ವೇ ಒಳಗೆ ಪ್ರವೇಶಿಸಿದ್ದಾನೆ.
ರನ್ ವೇ ಕೌಪೌಂಡ್ ಅಂತಾ ಗೊತ್ತಿಲ್ಲದೇ ಒಳಗೆ ಪ್ರವೇಶಿಸಿದ್ದಾನೆ. ಆದರೆ ಇದರ ಹಿಂದೆ ಭಧ್ರತಾ ಸಿಬ್ಬಂದಿಗಳ ನಿರ್ಲಕ್ಷ್ಯವಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೂಡಲೇ ರಾಕೇಶ್‌ನನ್ನು ವಶಕ್ಕೆ ಪಡೆದ CISF ಸಿಬ್ಬಂದಿ, ವಿಚಾರಣೆ ನಡೆಸಿ ಬಜಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.


ಎರಡು ವರ್ಷಗಳ ಹಿಂದೆ ಆದಿತ್ಯರಾವ್ ಎಂಬ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇಟ್ಟಿದ್ದ. ಒಂದು ದಿನದ ಬಳಿಕ ಬೆಂಗಳೂರಿನಲ್ಲಿ ಪೊಲೀಸರಿಗೆ ಆರೋಪಿ ಶರಣಾಗಿದ್ದ.
ಕರ್ನಾಟಕದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಮಂಗಳೂರು ವಿಮಾನ ನಿಲ್ದಾಣವೂ ಒಂದಾಗಿದೆ. ಅದಾನಿ ಕಂಪನಿಗೆ ವಿಮಾನ ನಿಲ್ದಾಣವನ್ನು ಗುತ್ತಿಗೆ ನೀಡಲಾಗಿದೆ. ಸಿಐಎಸ್‌ಎಫ್ ಪಡೆ ನಿಲ್ದಾಣದ ಭದ್ರತೆಯನ್ನು ನೋಡಿಕೊಳ್ಳುತ್ತದೆ.

Share post:

Subscribe

spot_imgspot_img

Popular

More like this
Related

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...