ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ರಚನೆ: ಸಚಿವ ಪರಮೇಶ್ವರ್‌

Date:

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾರಚನೆಯಾಗಲಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದರು. ಯಾವುದೇ ಸರ್ಕಾರದ ಹಸ್ತಾಕ್ಷೇಪ ಇಲ್ಲದೆ ಈ ಪ್ರಕರಣ ತನಿಖೆಯಾಗಲಿದೆ. ಪ್ರಜ್ವಲ್ ರೇವಣ್ಣಗೆ ನೋಟಿಸ್‌ ಕೊಡುವ ವಿಚಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಇಂದು ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು !

ಇಂದು ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ! ಚಿತ್ರದುರ್ಗ:...

ನಿಮಗೆ ಗೊತ್ತೆ..? ಮೂಳೆ ವೀಕ್ ಆಗುವುದಕ್ಕೆ ನಿಮ್ಮ ಈ 5 ಅಭ್ಯಾಸಗಳೇ ಕಾರಣ

ನಿಮಗೆ ಗೊತ್ತೆ..? ಮೂಳೆ ವೀಕ್ ಆಗುವುದಕ್ಕೆ ನಿಮ್ಮ ಈ 5 ಅಭ್ಯಾಸಗಳೇ...

ಕರ್ನಾಟಕದಲ್ಲಿ ಮಳೆ ಸ್ಥಗಿತ: ಇಂದು ರಾಜ್ಯದೆಲ್ಲೆಡೆ ಒಣಹವೆಯ ವಾತಾವರಣ

ಕರ್ನಾಟಕದಲ್ಲಿ ಮಳೆ ಸ್ಥಗಿತ: ಇಂದು ರಾಜ್ಯದೆಲ್ಲೆಡೆ ಒಣಹವೆಯ ವಾತಾವರಣ ಬೆಂಗಳೂರು: ಕಳೆದ ಕೆಲವು...

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ. ಶಿವಕುಮಾರ್

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ....