ಈ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣ ಉಚಿತ

Date:

ಬಿಎಂಟಿಸಿ ಬಸ್‌ಗಳಲ್ಲಿ 9-12ನೇ ತರಗತಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಕಳೆದ ವರ್ಷದ ಸ್ಮಾರ್ಟ್ ಪಾಸ್ ಅಥವಾ ಈ ವರ್ಷದ ಶೈಕ್ಷಣಿಕ ದಾಖಲಾತಿ ರಶೀತಿ ತೋರಿಸಿ ಪ್ರಯಾಣಿಸಬಹುದಾಗಿದೆ.

ಮುಂದಿನ ಸೋಮವಾರ(ಆ.23) ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿವೆ. ಈ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರ ಮತ್ತು ಖಾಸಗಿ ಶಾಲೆಗೆ ಮಕ್ಕಳನ್ನು .ಯಾವ ರೀತಿ ಕರೆತರಬೇಕು, ತರಗತಿಯಲ್ಲಿ ಯಾವ ರೀತಿ ಕೂರಿಸಬೇಕು, ಮಕ್ಕಳು ಶಾಲೆಯಲ್ಲಿ ಯಾವ ರೀತಿ ಇರಬೇಕು, ಶಿಕ್ಷಕರು ಯಾವ ರೀತಿ ಮುಂಗಾಗ್ರತಾ ಕೊರೋನಾ ನಿಯಮಗಳನ್ನು ಪಾಲಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಪಾಲಕರ ಅನುಮತಿ ಪಡೆದೇ ಶಾಲೆಗೆ ಬರಬೇಕು ಎಂದು ಹೇಳಿದ್ದಾರೆ.

ಸೋಮವಾರದಿಂದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ನಾಗೇಶ್ ಅವರ ಜೊತೆ ಬೆಂಗಳೂರು ಮತ್ತು ಕೆಲವು ಜಿಲ್ಲೆಗಳ ಶಾಲೆಗಳಿಗೆ ಭೇಟಿ ನೀಡಿ ನೋಡುತ್ತೇನೆ. ಕೋವಿಡ್ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಮಕ್ಕಳು ಶಾಲೆಗೆ ಬಂದು ಕಲಿಕೆಯಾಗಬೇಕು, ಒಂದೂವರೆ ವರ್ಷದಿಂದ ಮಕ್ಕಳು ಶಾಲೆಗೆ ಹೋಗಿಲ್ಲ, ನಿಧಾನವಾಗಿ ಅವರು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಸದುದ್ದೇಶದಿಂದ ಶಾಲೆ ಪ್ರಾರಂಭಿಸುತ್ತಿದ್ದೇವೆ ಎಂದರು

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...