ಈ 6 ಸೇನಾ ಯೋಧರಿಗೆ ಶೌರ್ಯ ಚಕ್ರ

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಉಗ್ರರ ಹುಟ್ಟಡಗಿಸಿದ ಭಾರತೀಯ ಸೇನಾ ಸಿಬ್ಬಂದಿಗೆ ದೇಶದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕಳೆದ ವರ್ಷ ಯೋಧರ ಸಾಧನೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ.

 

ಭಾರತೀಯ ಸೇನೆಯ ಪ್ರಕಾರ, ಮೇಜರ್ ಅರುಣ್ ಕುಮಾರ್ ಪಾಂಡೆ, ಮೇಜರ್ ರವಿಕುಮಾರ್ ಚೌಧರಿ, ಕ್ಯಾಪ್ಟನ್ ಅಶುತೋಷ್ ಕುಮಾರ್ (ಮರಣೋತ್ತರ), ಕ್ಯಾಪ್ಟನ್ ವಿಕಾಸ್ ಖಾತ್ರಿ, ರೈಫಲ್ ಮ್ಯಾನ್ ಮುಖೇಶ್ ಕುಮಾರ್ ಮತ್ತು ಸಿಪಾಯಿ ನೀರಜ್ ಅಹ್ಲಾವತ್ ಅವರಿಗೆ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಸ್ವಾತಂತ್ರ್ಯ ದಿನಾಚರಣೆ ದಿನದಂದು ನಾಲ್ಕು ಸೇನಾ ಸಿಬ್ಬಂದಿಗೆ ಬಾರ್ ಟು ಸೇನಾ ಪದಕವನ್ನು ನೀಡುವುದಕ್ಕೆ ಹಾಗೂ 116 ಇತರರನ್ನು ಸೇನಾ ಪದಕಕ್ಕಾಗಿ ಹೆಸರಿಸಲಾಗಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಭಾರತೀಯ ಸೇನೆ ಪ್ರಕಾರ, ರಾಷ್ಟ್ರೀಯ ರೈಫಲ್ಸ್‌ನ 44 ನೇ ಬೆಟಾಲಿಯನ್‌ನ ಮೇಜರ್ ಪಾಂಡೆ ಕಳೆದ ವರ್ಷ ಜೂನ್ 9 ಮತ್ತು 10 ರಂದು ಜಮ್ಮು ಮತ್ತು ಕಾಶ್ಮೀರದ ಹಳ್ಳಿಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿದರು. ಇಬ್ಬರು ಹಾರ್ಡ್‌ಕೋರ್ ಭಯೋತ್ಪಾದಕರ ಹುಟ್ಟಗಿಸುವಲ್ಲಿ “ಅಪ್ರತಿಮ ಧೈರ್ಯ” ತೋರಿಸಿದ್ದರು.

 

 

 

Share post:

Subscribe

spot_imgspot_img

Popular

More like this
Related

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ....

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿ.ಕೆ....

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...