No menu items!
8 C
Munich
Wednesday, April 15, 2026

ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

Must read

ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು: ಡಿಕೆ ಶಿವಕುಮಾರ್

ಮೈಸೂರು: ಉಗ್ರರ ಅಟ್ಟಹಾಸದ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ, ಯಾರ ವಿರುದ್ದವೂ ಮಾತನಾಡುವುದಿಲ್ಲ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ,
ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು. ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ, ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ.
ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದರು. ಇನ್ನೂ ಕಾವೇರಿ ನಮ್ಮ ಜೀವನದಿ. ತಾಯಿಗೆ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ, ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article