ಉತ್ತರ ಪ್ರದೇಶದ ಪ್ರಯಾಗ್ ರಾಜ್ ರೈಲು‌ ನಿಲ್ದಾಣದಲ್ಲಿ ಕೇಳಲಿದೆ‌ ಕನ್ನಡ ಭಾಷೆ..!!

Date:

ಉತ್ತರ ಪ್ರದೇಶದ ಪ್ರಯಾಗ್ ರಾಜ್ ರೈಲು‌ ನಿಲ್ದಾಣದಲ್ಲಿ ಕೇಳಲಿದೆ‌ ಕನ್ನಡ ಭಾಷೆ..!!

ವಿಶ್ವದ ಅತೀ ದೊಡ್ಡ ಧಾರ್ಮಿಕ ಸಮಾಗಮವೆನಿಸಿರುವ ಕುಂಭಮೇಳ‌ಕ್ಕೆ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಚಾಲನೆ ಸಿಕ್ಕಿದ್ದು, 50 ದಿನಗಳ ಕಾಲ ಕುಂಭಮೇಳದ ಅಂಗವಾಗಿ ಭಕ್ತಾಧಿಗಳ ಮಹಾ ಪ್ರವಾಹವೇ ಇಲ್ಲಿಗೆ ಹರಿದುಬರಲಿದೆ..

ಹೀಗಾಗೆ ಉತ್ತರ ಪ್ರದೇಶದ ಅಲಹಾಬಾದ್ ( ಪ್ರಯಾಗ್ ರಾಜ್) ರೈಲು ನಿಲ್ದಾಣದಲ್ಲಿ ಕನ್ನಡ ಸೇರಿದಂತೆ 6 ಭಾಷೆಗಳಲ್ಲಿ ರೈಲು ಸಂಚಾರದ ಬಗ್ಗೆ ಮಾಹಿತಿಯನ್ನ ನೀಡಲು ತೀರ್ಮಾನಿಸಲಾಗಿದೆ.. ಹೌದು, ಸದ್ಯ ಹಿಂದಿಯೇತರ ಭಾಷೆಗಳ ಭಕ್ತರು ಸಹ ಈ ಕುಂಭಮೇಳಕ್ಕೆ ಆಗಮಿಸುತ್ತಿರುವುದರಿಂದ ಈ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ಕನ್ನಡ, ತಮಿಳು, ಮಲಯಾಳಂ, ಮರಾಠಿ, ಗುಜರಾತಿ, ಇಂಗ್ಲೀಷ್ ಭಾಷೆಯಲ್ಲಿ ಸ್ವಯಂಕೃತವಾಗಿ ತರ್ಜುಮೆ ಮಾಡುವ ಸಾಫ್ಟ್‌ವೇರ್ ವ್ಯವಸ್ಥೆಯನ್ನ ಈ ರೈಲು ನಿಲ್ದಾಣದಲ್ಲಿ ಅಳವಡಿಸಲಾಗಿದೆ..

ಈ ಮೂಲಕ‌ ದೇಶದ ಮೂಲೆಮೂಲೆಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲ್ಲಿದ್ದು, ಇಂತಹದೊಂದು ಭಾಷಾ ತರ್ಜುಮೆ ಸಾಫ್ಟ್‌ವೇರ್ ಅನ್ನ ಅಳವಡಿಸಲು ಕುಂಭಮೇಳಕ್ಕು ಮುಂಚಿತವಾಗಿ ಆಲೋಚನೆ ಮಾಡಲಾಗಿತ್ತು ಎಂದು ಅಲ್ಲಿನ ರೈಲ್ವೇ ಅಧಿಕಾರಿಗಳು ಸ್ಪಷ್ಟಪಡೆಸಿದ್ದಾರೆ…

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...