ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಾಂಜಾ ಸಾಗಾಟಗಾರರು!

Date:

ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗಾಂಜಾ ಸಾಗಾಟಗಾರರು!

ಮಂಗಳೂರಿನ ಉಳ್ಳಾಲ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ಗಾಂಜಾಸಾಗಾಟ ಮಾಡುತ್ತಿದ್ದ ನಾಲ್ವರು ಬಲೆಗೆ ಬಿದ್ದಿದ್ದಾರೆ.
ದರೋಡೆ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದಾಗ ಮೀನಿನ ಲಾರಿಯಲ್ಲಿ ಗಾಂಜಾಸಾಗಾಟ ಮಾಡುತ್ತಿದ್ದ ಆರೋಪಿಗಳು ಉಳ್ಳಾಲ ಪೊಲೀಸರ ಕಣ್ಣಿಗೆ ಬಿದ್ದಿದ್ದಾರೆ.

ಇನ್ಸ್ ಪೆಕ್ಟರ್ ಸಂದೀಪ್ ಮತ್ತು ತಂಡದವರು ಕೂಡಲೇ ಲಾರಿಯನ್ನು ತಡೆದು ವಿಚಾರಣೆ ನಡೆಸಿ ಗಾಂಜಾ ಸಾಗಾಟವನ್ನು ಬಯಲಿಗೆಳೆದಿದ್ದಾರೆ.


ಕಾಸರಗೋಡಿನ ಮಹಮ್ಮದ್ ಫಾರೂಕ್, ಕೊಡಗಿನ ಸೈಯದ್ ಮಹಮ್ಮದ್, ಮುಡಿಪಿನ ಮಹಮ್ಮದ್ ಅನ್ಸಾರಿ, ಮಂಜೇಶ್ವರದ ಮೊಹಿದ್ದಿನ್ ನವಾಜ್ ಬಂಧಿತ ಆರೋಪಿಗಳು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರಿಂದ 200 ಕೆ.ಜಿ. ಗಾಂಜಾ, 3 ತಲ್ವಾರ್, 1 ಚಾಕು ವಶಪಡಿಸಿಕೊಳ್ಳಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...