ವಾಟ್ಸ್ ಆ್ಯಪ್ ಗೆ ಸರಕಾರ ಖಡಕ್ ಎಚ್ಚರಿಕೆ..! ಏನಿದು?

admin
1 Min Read

ಹೊಸದಿಲ್ಲಿ: ವಿವಾದಿತ ಪ್ರೈವಸಿ ಪಾಲಿಸಿ ಅಪ್ಡೇಟ್‌ನ್ನು ಹಿಂಪಡೆಯುವಂತೆ ವಾಟ್ಸಾಪ್‌ಗೆ ಸರಕಾರ ಸೂಚಿಸಿದೆ. ಭಾರತೀಯ ಬಳಕೆದಾರರ ಮಾಹಿತಿಯ ಗೌಪ್ಯತೆ ಮತ್ತು ದತ್ತಾಂಶ ಸುರಕ್ಷತೆಯನ್ನು ಕಾಪಾಡುವಂತೆ ಸರಕಾರ ಹೇಳಿದೆ.

ಈ ನೀತಿಯನ್ನು ಫೇಸ್‌ಬುಕ್ ಒಡೆತನದ ವಾಟ್ಸಾಪ್‌ ಅನಾವರಣಗೊಳಿಸಿದ ಬಗ್ಗೆ ಸರಕಾರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದ ಬಗ್ಗೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಂಪನಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ವಾಟ್ಸಾಪ್‌ ಸಿಇಒ ವಿಲ್‌ ಕ್ಯಾಥ್‌ಕಾರ್ಟ್‌ಗೆ ಪತ್ರ ಬರೆಯಲಾಗಿದೆ. ಅಪ್ಡೇಟ್‌ ಮತ್ತು ಫೇಸ್‌ಬುಕ್‌ನೊಂದಿಗಿನ ಡೇಟಾ-ಹಂಚಿಕೆ ಭಾರತೀಯ ಬಳಕೆದಾರರನ್ನು ಹೆಚ್ಚಿನ ಭದ್ರತಾ ಅಪಾಯಗಳು ಮತ್ತು ದೋಷಗಳಿಗೆ ಒಡ್ಡುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದರ ಜತೆಗೆ, ‘ಒಂದೋ ನೀತಿಯನ್ನು ಒಪ್ಪಿಕೊಳ್ಳಿ, ಇಲ್ಲವೇ ವಾಟ್ಸಾಪ್‌ನ್ನು ತೊರೆಯಿರಿ’ ಎಂಬ ಕಂಪನಿಯ ಹಠಮಾರಿ ಧೋರಣೆಯ ಬಗ್ಗೆಯೂ ಸರಕಾರ ಅಸಮಧಾನ ವ್ಯಕ್ತಪಡಿಸಿದೆ.

 

Share This Article
Leave a Comment