ವಾಟ್ಸ್ ಆ್ಯಪ್ ಗೆ ಸರಕಾರ ಖಡಕ್ ಎಚ್ಚರಿಕೆ..! ಏನಿದು?

Date:

ಹೊಸದಿಲ್ಲಿ: ವಿವಾದಿತ ಪ್ರೈವಸಿ ಪಾಲಿಸಿ ಅಪ್ಡೇಟ್‌ನ್ನು ಹಿಂಪಡೆಯುವಂತೆ ವಾಟ್ಸಾಪ್‌ಗೆ ಸರಕಾರ ಸೂಚಿಸಿದೆ. ಭಾರತೀಯ ಬಳಕೆದಾರರ ಮಾಹಿತಿಯ ಗೌಪ್ಯತೆ ಮತ್ತು ದತ್ತಾಂಶ ಸುರಕ್ಷತೆಯನ್ನು ಕಾಪಾಡುವಂತೆ ಸರಕಾರ ಹೇಳಿದೆ.

ಈ ನೀತಿಯನ್ನು ಫೇಸ್‌ಬುಕ್ ಒಡೆತನದ ವಾಟ್ಸಾಪ್‌ ಅನಾವರಣಗೊಳಿಸಿದ ಬಗ್ಗೆ ಸರಕಾರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದ ಬಗ್ಗೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಂಪನಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ವಾಟ್ಸಾಪ್‌ ಸಿಇಒ ವಿಲ್‌ ಕ್ಯಾಥ್‌ಕಾರ್ಟ್‌ಗೆ ಪತ್ರ ಬರೆಯಲಾಗಿದೆ. ಅಪ್ಡೇಟ್‌ ಮತ್ತು ಫೇಸ್‌ಬುಕ್‌ನೊಂದಿಗಿನ ಡೇಟಾ-ಹಂಚಿಕೆ ಭಾರತೀಯ ಬಳಕೆದಾರರನ್ನು ಹೆಚ್ಚಿನ ಭದ್ರತಾ ಅಪಾಯಗಳು ಮತ್ತು ದೋಷಗಳಿಗೆ ಒಡ್ಡುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದರ ಜತೆಗೆ, ‘ಒಂದೋ ನೀತಿಯನ್ನು ಒಪ್ಪಿಕೊಳ್ಳಿ, ಇಲ್ಲವೇ ವಾಟ್ಸಾಪ್‌ನ್ನು ತೊರೆಯಿರಿ’ ಎಂಬ ಕಂಪನಿಯ ಹಠಮಾರಿ ಧೋರಣೆಯ ಬಗ್ಗೆಯೂ ಸರಕಾರ ಅಸಮಧಾನ ವ್ಯಕ್ತಪಡಿಸಿದೆ.

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...