ವಾಟ್ಸ್ ಆ್ಯಪ್ ಗೆ ಸರಕಾರ ಖಡಕ್ ಎಚ್ಚರಿಕೆ..! ಏನಿದು?

Date:

ಹೊಸದಿಲ್ಲಿ: ವಿವಾದಿತ ಪ್ರೈವಸಿ ಪಾಲಿಸಿ ಅಪ್ಡೇಟ್‌ನ್ನು ಹಿಂಪಡೆಯುವಂತೆ ವಾಟ್ಸಾಪ್‌ಗೆ ಸರಕಾರ ಸೂಚಿಸಿದೆ. ಭಾರತೀಯ ಬಳಕೆದಾರರ ಮಾಹಿತಿಯ ಗೌಪ್ಯತೆ ಮತ್ತು ದತ್ತಾಂಶ ಸುರಕ್ಷತೆಯನ್ನು ಕಾಪಾಡುವಂತೆ ಸರಕಾರ ಹೇಳಿದೆ.

ಈ ನೀತಿಯನ್ನು ಫೇಸ್‌ಬುಕ್ ಒಡೆತನದ ವಾಟ್ಸಾಪ್‌ ಅನಾವರಣಗೊಳಿಸಿದ ಬಗ್ಗೆ ಸರಕಾರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದ ಬಗ್ಗೆ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕಂಪನಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ವಾಟ್ಸಾಪ್‌ ಸಿಇಒ ವಿಲ್‌ ಕ್ಯಾಥ್‌ಕಾರ್ಟ್‌ಗೆ ಪತ್ರ ಬರೆಯಲಾಗಿದೆ. ಅಪ್ಡೇಟ್‌ ಮತ್ತು ಫೇಸ್‌ಬುಕ್‌ನೊಂದಿಗಿನ ಡೇಟಾ-ಹಂಚಿಕೆ ಭಾರತೀಯ ಬಳಕೆದಾರರನ್ನು ಹೆಚ್ಚಿನ ಭದ್ರತಾ ಅಪಾಯಗಳು ಮತ್ತು ದೋಷಗಳಿಗೆ ಒಡ್ಡುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದರ ಜತೆಗೆ, ‘ಒಂದೋ ನೀತಿಯನ್ನು ಒಪ್ಪಿಕೊಳ್ಳಿ, ಇಲ್ಲವೇ ವಾಟ್ಸಾಪ್‌ನ್ನು ತೊರೆಯಿರಿ’ ಎಂಬ ಕಂಪನಿಯ ಹಠಮಾರಿ ಧೋರಣೆಯ ಬಗ್ಗೆಯೂ ಸರಕಾರ ಅಸಮಧಾನ ವ್ಯಕ್ತಪಡಿಸಿದೆ.

 

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...